Select Your Language

Notifications

webdunia
webdunia
webdunia
webdunia

ಗಣಪತಿ ಆತ್ಮಹತ್ಯೆ ಪ್ರಕರಣದ 3ನೇ ಆರೋಪಿ ಎಂ.ಎಂ.ಪ್ರಸಾದ್ ವರ್ಗಾವಣೆ!

ಗಣಪತಿ ಆತ್ಮಹತ್ಯೆ ಪ್ರಕರಣದ 3ನೇ ಆರೋಪಿ ಎಂ.ಎಂ.ಪ್ರಸಾದ್ ವರ್ಗಾವಣೆ!
ಬೆಂಗಳೂರು , ಶುಕ್ರವಾರ, 22 ಜುಲೈ 2016 (18:42 IST)
ರಾಜ್ಯ ಸರಕಾರ ಹೊಸದಾಗಿ ಸೃಷ್ಠಿಸಿರುವ ಬೆಂಗಳೂರು ನಗರ ಸಂಚಾರ ಆಯುಕ್ತ ಹುದ್ದೆಗೆ, ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಮೂರನೇ ಆರೋಪಿಯಾಗಿರುವ ಎಂ.ಎಂ ಪ್ರಸಾದ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
 
ಪ್ರಸ್ತುತ, ಗುಪ್ತದಳ ಮುಖ್ಯಸ್ಥರಾಗಿದ್ದ ಎಂ.ಎಂ ಪ್ರಸಾದ್ ಅವರನ್ನು ಬೆಂಗಳೂರು ನಗರ ಸಂಚಾರ ಆಯುಕ್ತ ಹುದ್ದೆಗೆ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಸಂಚಾರ ಆಯುಕ್ತ ಹುದ್ದೆಯೂ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಹುದ್ದೆಗೆ ಸಮನಾಗಿದೆ.
 
ಹೆಚ್ಚುವರಿ ಪೊಲೀಸ್ ಆಯುಕ್ತರ ಹುದ್ದೆಯನ್ನು ರದ್ದು ಪಡಿಸಿರುವ ರಾಜ್ಯ ಸರಕಾರ, ಹೊಸದಾಗಿ ಬೆಂಗಳೂರು ನಗರ ಸಂಚಾರ ಆಯುಕ್ತ ಹುದ್ದೆ ಸೃಷ್ಠಿಮಾಡಿದೆ ಎಂದು ಹೇಳಲಾಗುತ್ತಿದೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ದಲಿತರ ಮೇಲೆ ದೌರ್ಜನ್ಯ: ಪ್ರಧಾನಿ ಮೋದಿ ಮೌನದ ವಿರುದ್ಧ ಲಾಲು ಯಾದವ್ ವಾಗ್ದಾಳಿ