ಶಾಸಕ ಮೊಯಿದ್ದೀನ್ ಬಾವಾಗೆ ಹೂಮಾಲೆ: ಸಿಟ್ಟಿಗೆದ್ದ ದೇವರು

Webdunia
ಶುಕ್ರವಾರ, 4 ಮೇ 2018 (13:35 IST)
ದೇವಸ್ಥಾನಕ್ಕೆ ಆಗಮಿಸಿದ ಶಾಸಕ ಮೊಯಿದ್ದೀನ್ ಬಾವ ಗೆ ಮಾಲೆ ಹಾಕಿದ್ದನ್ನು ಸ್ಥಳೀಯ ಯುವಕರು ಅಕ್ಷೇಪಿಸಿದ್ದರಿಂದ ದೈವ ತನ್ನ ಆಯುಧವನ್ನು ನೆಲಕ್ಕೆ ಊರಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳೂರಿನ ಮಲ್ಲೂರು ದೈವಸ್ಥಾನದಲ್ಲಿ ನಡೆದಿದೆ.
 ಕಳೆದ ‌ಸೋಮವಾರ ಮಲ್ಲೂರು ದೈವಸ್ಥಾನದಲ್ಲಿ ಧೂಮಾವತಿ ಬಂಟ ದೈವಗಳ ನೇಮೋತ್ಸವ ಕಾರ್ಯಕ್ರಮ ನಡೆಯುತಿತ್ತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕ ಮೊಯಿದ್ದೀನ್ ಬಾವ ಸ್ಥಳಕ್ಕೆ ಆಗಮಿಸಿದ್ರು. 
 
ಈ ಸಂದರ್ಭದಲ್ಲಿ ದೈವದ ಸೂಚನೆ ಮೇರೆಗೆ ಕ್ಷೇತ್ರದ ಮುಖ್ಯಸ್ಥರು ಮೊಯಿದ್ದೀನ್ ಬಾವ ಗೆ ಹೂ ಹಾರವನ್ನು ಹಾಕಿದ್ದರು. ಇದಕ್ಕೆ ಅಲ್ಲಿದ್ದ ಯುವಕರು ಅಕ್ಷೇಪ ವ್ಯಕ್ತಪಡಿಸಿದ್ದರು. ಮೊಯಿದ್ದೀನ್ ಬಾವ ಎದುರಲ್ಲೇ ಯುವಕರು ಗಲಾಟೆ ಆರಂಭಿಸಿದ್ದರು. ಇದನ್ನೆಲ್ಲಾ ಮೆಟ್ಟಿಲಲ್ಲಿ ಕುಳಿತು ನೋಡುತ್ತಿದ್ದ ದೈವ ಗುಡಿಯ ಒಳಗಿದ್ದ ಆಯುಧ ವನ್ನು ತೆಗೆದುಕೊಂಡು ನೆಲಕ್ಕೆ ಊರಿ ಆಕ್ರೋಶ ವ್ಯಕ್ತಪಡಿಸಿದೆ. ತುಳುನಾಡಿನಲ್ಲಿ ದೈವಗಳ ಮೇಲೆ ಜನರಿಗೆ ಅಪಾರ ನಂಬಿಕೆ ಇದ್ದು ದೈವ ಆಯುಧವನ್ನು ನೆಲಕ್ಕೆ ಊರಿದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂಬ ನಂಬಿಕೆ ಇದೆ. ಹಾಗಾಗಿ ದೈವ ದ ಆಕ್ರೋಶ ಜನರಲ್ಲಿ ಭಯವನ್ನು ಉಂಟುಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments