Webdunia - Bharat's app for daily news and videos

Install App

ರಾಜ್ ಕುಟುಂಬಕ್ಕೆ ಗ್ಯಾಸ್ ಸಂಪರ್ಕ ಕೊಡಿಸಿದ್ದೆ!

Webdunia
ಮಂಗಳವಾರ, 17 ಆಗಸ್ಟ್ 2021 (08:53 IST)
ಬೆಂಗಳೂರು (ಆ.17):  ರಾಜ್ಕುಮಾರ್ ಅವರ ಕುಟುಂಬದೊಂದಿಗೆ ತಮಗೆ ಅವಿನಾಭಾವ ಸಂಬಂಧವಿದೆ. ರಾಘವೇಂದ್ರ ರಾಜ್ಕುಮಾರ್, ಶಿವರಾಜ್ ಕುಮಾರ್, ಪುನೀತ್ ರಾಜ್ಕುಮಾರ್ ಮೊದಲಿನಿಂದಲೂ ಆತ್ಮೀಯರು.

 ಪಾರ್ವತಮ್ಮನವರಿಗೆ ನನ್ನ ಮೇಲೆ ಹೆಚ್ಚು ಪ್ರೀತಿ ಇತ್ತು. ಸಣ್ಣ ಸಣ್ಣ ಬೇಡಿಕೆಯನ್ನೂ ಹಂಚಿಕೊಳ್ಳುತ್ತಿದ್ದರು. ಒಂದು ಅಡುಗೆ ಅನಿಲ ಸಿಲಿಂಡರ್ ಸಂಪರ್ಕ ಕೊಡಿಸಪ್ಪಾ ಎಂದು ಹಿಂದೆ ಕೇಳಿದ್ದರು. ನಮ್ಮ ತಂದೆಯವರ ಸಂಸದರ ಕೋಟಾದಿಂದ ಕನೆಕ್ಷನ್ ಕೊಡಿಸಿದ್ದೆ ಎರಡು ದಿವಸದ ನಂತರ ಅಮ್ಮ ಫೋನ್ ಮಾಡಿ ಗ್ಯಾಸ್ ಕನೆಕ್ಷನ್ ಕೊಡಿಸಿದ್ದೀರಾ. ಊಟ ತಯಾರು ಮಾಡಿದ್ದೀನಿ. ಊಟಕ್ಕೆ ಬನ್ನಿ ಎಂದು ಆಹ್ವಾನಿಸಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಮರಿಸಿದರು.
ಬೆಂಗಳೂರಿನಲ್ಲಿ ಡಾ.ರಾಜ್ಕುಮಾರ್ ಶೈಕ್ಷಣಿಕ ಆ್ಯಪ್ ಬಿಡುಗಡೆ ಸಮಾರಂಭವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ನಟರಾದ ರಾಘವೇಂದ್ರ ರಾಜ್ಕುಮಾರ್, ಪುನೀತ್ ರಾಜ್ಕುಮಾರ್ ಹಾಜರಿದ್ದರು.
ಮೌಲಿಕ ಬದುಕನ್ನು ಬದುಕಿದರೆ ಸಾವಿನ ನಂತರವೂ ಜನ ನಮ್ಮನ್ನು ನೆನಪಿಸಿಕೊಳ್ಳುತ್ತಾರೆ. ಕರ್ನಾಟಕದ ಅಂತಹ ಏಕಮೇವ ತಾರೆ ಅಂದರೆ ಡಾ.ರಾಜ್ಕುಮಾರ್. ಅವರ ಸರಳತೆ, ನಡೆ, ನುಡಿ, ಮೌಲ್ಯಗಳನ್ನು ವಿಶೇಷವಾಗಿ ಅಧಿಕಾರದಲ್ಲಿರುವವರು, ಜನಪ್ರಿಯ ವ್ಯಕ್ತಿಗಳು ಕಲಿಯಬೇಕು. ಆಗಷ್ಟೇ ಹುಟ್ಟಿರುವ ಮಗುವಿನ ಮುಗ್ಧತೆ ಅವರಲ್ಲಿತ್ತು. ರಾಜ್ಕುಮಾರ್ ಅವರಲ್ಲಿದ್ದ ಸರಳತನ ಎಲ್ಲರಲ್ಲೂ ಕಂಡುಬರಲು ಸಾಧ್ಯವಿಲ್ಲ. ಬಹಳಷ್ಟುಸಾಧನೆ ಮಾಡಿದರೂ ಅವರಲ್ಲಿನ ಸರಳತನ ಕೊನೆಯವರೆಗೂ ಮಾಯವಾಗಲಿಲ್ಲ ಎಂದು ಸ್ಮರಿಸಿದರು.
ಹೊಳೆಯುವ ನಕ್ಷತ್ರ:  ಆಕಾಶದಲ್ಲಿ ಲೆಕ್ಕಕ್ಕಿಲ್ಲದಷ್ಟುನಕ್ಷತ್ರ ಇರಬಹುದು. ಅದರಲ್ಲಿ ಒಂದು ಮಾತ್ರ ಎಲ್ಲದಕ್ಕಿಂತ ಹೆಚ್ಚು ಹೊಳೆಯುತ್ತಿರುತ್ತದೆ. ಆ ನಕ್ಷತ್ರವೇ ರಾಜ್ಕುಮಾರ್ ಅವರು. ಅವರ ಶಿಕ್ಷಣದ ಕನಸನ್ನು ಈಗ ಅವರ ಕುಟುಂಬದವರು ಸಾಕಾರ ಮಾಡುತ್ತಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣದಲ್ಲಿ ಸಿಎಂ ಪತ್ನಿಗೆ ರಿಲೀಫ್: ಇಡಿಗೆ ಸುಪ್ರೀಂಕೋರ್ಟ್ ಛೀಮಾರಿ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಮಂಜುನಾಥನಿಗೆ ಕೆಟ್ಟ ಹೆಸರು ತಂದ್ರೆ ಈ ಸರ್ಕಾರ ಸರ್ವನಾಶವಾಗುತ್ತದೆ: ಜನಾರ್ಧನ ರೆಡ್ಡಿ

ಕಂಪ್ಯೂಟರ್ ಮುಂದೆ ಕೆಲಸ ಮಾಡುವವರು ಡಾ ಭುಜಂಗ ಶೆಟ್ಟಿ ನೀಡಿದ್ದ ಈ ಸಲಹೆ ಗಮನಿಸಿ

ಮುಂದಿನ ಸುದ್ದಿ
Show comments