Webdunia - Bharat's app for daily news and videos

Install App

ಗೇಟ್ ಅಳವಡಿಕೆ ಯಶಸ್ವಿ, ತುಂಗಭದ್ರಾ ಅಣೆಕಟ್ಟಿನಲ್ಲಿ ಮತ್ತೇ ಏರುತ್ತಿದೆ ನೀರಿನ ಮಟ್ಟ

Sampriya
ಭಾನುವಾರ, 18 ಆಗಸ್ಟ್ 2024 (12:32 IST)
Photo Courtesy X
ಹೊಸಪೇಟೆ: ಮುರಿದು ಹೋಗಿದ್ದ ತುಂಗಭದ್ರಾ ಅಣೆಕಟ್ಟೆಯ 19ನೇ ಕ್ರಸ್ಟ್‌ಗೇಟ್‌ಗೆ ತಾತ್ಕಾಲಿಕ ಗೇಟ್ ಅಳವಡಿಕೆ ಪೂರ್ಣಗೊಂಡಿದ್ದು, ತಜ್ಞರ ನಿರೀಕ್ಷೆಯಂತೆ ನೀರು ಹೊರಹರಿಯುವಿಕೆ ಬಹುತೇಕ ನಿಂತುಹೋಗಿದೆ.

ತಾತ್ಕಾಲಿಕ ಗೇಟ್‌ನಿಂದ ಸ್ವಲ್ಪ ನೀರು ಸೋರಿಕೆ ಸಾಮಾನ್ಯವಾಗಿದ್ದು, ಅದರಿಂದ ದೊಡ್ಡ ನಷ್ಟವಿಲ್ಲ ಎಂದು ಹೇಳಲಾಗುತ್ತಿದೆ.

ಆಗಸ್ಟ್ 10ರಂದು ರಾತ್ರಿ ಗೇಟ್‌ ಮುರಿದು ಕೊಚ್ಚಿ ಹೋಗಿದ್ದರಿಂದ 36 ಟಿಎಂಸಿ ಅಡಿಗೂ ಅಧಿಕ ನೀರು ನದಿ ಪಾಲಾಗಿತ್ತು. ತಾತ್ಕಾಲಿಕ ಗೇಟ್‌ನಿಂದ ಇದೀಗ ಇನ್ನಷ್ಟು ನೀರು ನದಿ ಪಾಲಾಗುವುದು ತಪ್ಪಿ ಹೋಗಿದೆ.

ಇಂದು ಸನ್ಮಾನ: ತಾತ್ಕಾಲಿಕ ಗೇಟ್ ಅಳವಡಿಸಿ ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿದ ತಂತ್ರಜ್ಞರು, ಸಿಬ್ಬಂದಿಯನ್ನು ಇಂದು ಮಧ್ಯಾಹ್ನ ಅಣೆಕಟ್ಟೆಯ ಆವರಣದಲ್ಲಿ ಸನ್ಮಾನಿಸಲು ಸಿದ್ಧತೆ ನಡೆದಿದೆ.

ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್‌ ಅವರು 35 ಸಿಬ್ಬಂದಿಗೆ ತಲಾ ₹50 ಸಾವಿರ ಬಹುಮಾನ ಪ್ರಕಟಿಸಿದ್ದು, ಬಹುತೇಕ ಇಂದೇ ಅದನ್ನು ಶಾಸಕ ಕಂಪ್ಲಿ ಗಣೇಶ್ ಅವರ ಮೂಲಕ ಹಸ್ತಾಂತರಿಸುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments