Webdunia - Bharat's app for daily news and videos

Install App

ಅನ್ನದಾತನನ್ನು ಆಚೆಗೆ ದಬ್ಬಿದ ಮೆಟ್ರೋ ಸಿಬ್ಬಂದಿಗೆ ಗೇಟ್‌ ಪಾಸ್‌

geetha
ಸೋಮವಾರ, 26 ಫೆಬ್ರವರಿ 2024 (18:40 IST)
ಬೆಂಗಳೂರು :ಎರಡು ದಿನಗಳ ಹಿಂದೆ ನಡೆದ ಈ ಘಟನೆಯಲ್ಲಿ, ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ವಯೋವೃದ್ಧ ರೈತರೊಬ್ಬರು ತಮ್ಮ ಮೂಟೆಯ ಸಹಿತ ಮೆಟ್ರೋ ಹತ್ತಲು ಬಂದಿದ್ದರು. ಆದರೆ ಮೆಟ್ರೋ ನಿಲ್ದಾಣದ ಭದ್ರತಾ ಸಿಬ್ಬಂದಿ ಕೊಳಕು ಬಟ್ಟೆ ಧರಿಸಿದ್ದಾರೆಂದು ಕ್ಯಾತೆ ತೆಗೆದು ಒಳಬಿಡಲು ನಿರಾಕರಿಸಿದ್ದರು. ಇದನ್ನು ಸ್ಥಳದಲ್ಲಿದ್ದ ಪ್ರಯಾಣಿಕರು ಮೊಬೈಲ್‌ ಮೂಲಕ ವಿಡಿಯೋ ಮಾಡಿ ಹರಿಬಿಟ್ಟಿದ್ದರು. 
 
ವೃದ್ಧ ರೈತರೊಬ್ಬರನ್ನು ಕೊಳಕು ಬಟ್ಟೆ ಧರಿಸಿದ್ದಾರೆಂಬ ಕಾರಣಕ್ಕೆ ಪ್ರವೇಶಾವಕಾಶ ನಿರಾಕರಿಸಿ ಅಪಮಾನಗೊಳಿಸಿದ್ದ ಮೆಟ್ರೋ ರೈಲು ಅಧಿಕಾರಿಗಳು ಜನಾಕ್ರೋಶಕ್ಕೆ ಮಣಿದಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಮೆಟ್ರೋ ಅಧಿಕಾರಿಗಳು ಕ್ರಮ ಕೈಗೊಂಡಿದ್ದು ಸಂಬಂಧಪಟ್ಟ ಭದ್ರತಾ ಸಿಬ್ಬಂದಿ ಮೇಲ್ವಿಚಾರಕನನ್ನುಸೇವೆಯಿಂದ ವಜಾಗೊಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಪ್ರತಿರೋಧ ವ್ಯಕ್ತವಾಗಿದ್ದು ಮೆಟ್ರೋ ಸಿಬ್ಬಂದಿ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದರು. ಮಾಧ್ಯಮಗಳಲ್ಲಿ ಈ ವರದಿ ಪ್ರಕಟವಾದ ಬಳಿಕ ಕ್ರಮಕ್ಕೆ ಮುಂದಾಗಿರುವ ಮೆಟ್ರೋ ಸಂಸ್ಥೆಯು ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments