Webdunia - Bharat's app for daily news and videos

Install App

ಕೆ.ಎಸ್.ಐ.ಸಿ ಯಿಂದ ಗೌರಿ ಗಣೇಶ ಹಬ್ಬದ ಕೊಡುಗೆ

Webdunia
ಮಂಗಳವಾರ, 11 ಸೆಪ್ಟಂಬರ್ 2018 (17:20 IST)
ರಾಜ್ಯದ ಜನರಿಗೆ ಕೆ.ಎಸ್.ಐ.ಸಿ ಗೌರಿ ಗಣೇಶ ಹಬ್ಬದ ಕೊಡುಗೆ ನೀಡಲು ಸಜ್ಜಾಗಿದೆ. ರಿಯಾಯತಿ ದರದಲ್ಲಿ ಮೈಸೂರು ರೇಷ್ಮೆ ಸೀರೆ ಮಾರಾಟಕ್ಕೆ ವೇದಿಕೆ ಸಜ್ಜುಗೊಂಡಿದೆ.

ರೇಷ್ಮೆ ಸಚಿವ ಸಾ.ರಾ. ಮಹೇಶ್ ಯೋಜನೆ ರೂಪಿಸಿದ್ದು, ಮಧ್ಯಮ ವರ್ಗದವರಿಗೂ ಮೈಸೂರು ರೇಷ್ಮೆ ಸೀರೆ ತಲುಪಿಸುವ ಉದ್ದೇಶದಿಂದ ಮಾರಾಟ ಮಾಡಲಾಗುತ್ತಿದೆ. ಕೆ.ಎಸ್.ಐ.ಸಿ ಯಿಂದ ಗೌರಿ ಗಣೇಶ ಹಬ್ಬದ ಕೊಡುಗೆ ಅಂಗವಾಗಿ 4,500 ರೂಪಾಯಿಗೆ ಮೈಸೂರು ರೇಷ್ಮೆ ಸೀರೆ ಲಭ್ಯವಾಗಲಿದೆ. ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮಾರಾಟಕ್ಕೆ ಚಾಲನೆ ನೀಡಿದರು.

ಮೈಸೂರಿನ ಚಾಮರಾಜೇಂದ್ರ ಮೃಗಾಲಯದ ಕೆ.ಎಸ್.ಐ.ಸಿ ಮಾರಾಟ ಮಳಿಗೆಯಲ್ಲಿ ಚಾಲನೆ ನೀಡಿದರು.
ಬೆಳಿಗ್ಗೆ 10 ರಿಂದ 3 ಗಂಟೆವರೆಗೆ ಅಧಾರ್ ಕಾರ್ಡ್ ನೀಡಿ ನೋಂದಣಿ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ. ಒಬ್ಬರಿಗೆ ಒಂದು ಸೀರೆ ಮಾತ್ರ ಮಾರಾಟ ಮಾಡಲಾಗುತ್ತದೆ.

3 ಗಂಟೆ ನಂತರ ಲಾಟರಿ ಮೂಲಕ ಆಯ್ಕೆ ಮಾಡಿ ಸೀರೆ ಮಾರಾಟಕ್ಕೆ ಸಿದ್ಧತೆ ನಡೆಸಲಾಗಿದೆ. ಮೈಸೂರು, ರಾಮನಗರ, ಬೆಳಗಾವಿ, ದಾವಣಗೆರೆ, ಬೆಂಗಳೂರಿನ ಮಾರಾಟ ಮಳಿಗೆಗಳಲ್ಲಿ ಸಿದ್ಧತೆ ಪೂರ್ಣಗೊಂಡಿದೆ.

ಸ್ಪನ್ ಸಿಲ್ಕ್ ಮಿಲ್ಸ್ ಆವರಣ ಮಂಗಳವಾರ ಪೇಟೆ ಚನ್ನಪಟ್ಟಣ, ಮೈಸೂರು ಮೃಗಾಲಯದ ಮಾರಾಟ ಮಳಿಗೆ ಮೈಸೂರು, ಕನ್ನಡ ಸಾಹಿತ್ಯ ಭವನ ಕಿತ್ತೂರು ರಾಣಿ ಚೆನ್ನಮ್ಮ ವೃತ್ತ ಬೆಳಗಾವಿ, ರೋಟರಿ ಬಾಲಭವನ ದಾವಣಗೆರೆ, ಎಫ್.ಕೆ.ಸಿ.ಸಿ.ಐ ಕಟ್ಟಡದ ಆವರಣ ಕೆಂಪೇಗೌಡ ರಸ್ತೆ ಬೆಂಗಳೂರು ಸೇರಿದಂತೆ ಒಟ್ಟು ರಾಜ್ಯದ 5 ಕಡೆ ಮಾರಾಟ ಮಳಿಗೆಗಳನ್ನು ಆರಂಭಿಸಲಾಗಿದೆ ಎಂದು ಸಚಿವ ಸಾ.ರಾ ಮಹೇಶ್ ಮಾಹಿತಿ ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಪಾಕಿಸ್ತಾನಕ್ಕೆ ಕ್ಲೀನ್ ಚಿಟ್ ಕೊಟ್ಟ ಚಿದಂಬರಂಗೆ ಬೆವರಿಳಿಸಿದ ಅಮಿತ್ ಶಾ: ವಿಡಿಯೋ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಅಮಾನತು ಮಾಡೋದು, ಮತ್ತೆ ರದ್ದು ಮಾಡೋದು ಎಲ್ಲಾ ನಾಟಕ: ಬಿವೈ ವಿಜಯೇಂದ್ರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments