Webdunia - Bharat's app for daily news and videos

Install App

ಬೆದರಿಕೆ ಕರೆ ಬರುತ್ತಿರುವ ಬಗ್ಗೆ ಆಪ್ತರ ಬಳಿ ಹೇಳಿಕೊಂಡಿದ್ದ ಗೌರಿ ಲಂಕೇಶ್

Webdunia
ಬುಧವಾರ, 6 ಸೆಪ್ಟಂಬರ್ 2017 (13:02 IST)
ವಿಚಾರವಾದಿ, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನ ಅವರ ಮನೆಯಲ್ಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ನಕ್ಸಲರನ್ನ ಮುಖ್ಯವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಗೌರಿ ಲಂಕೇಶ್, ಬಲಪಂಥೀಐ ಧೋರಣೆಗಳನ್ನ ತಮ್ಮ ಬರವಣಿಗೆ ಮೂಲಕ ವಿರೋಧಿಸುತ್ತಲೇ ಬಂದಿದ್ದರು. ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಗೌರಿ ಲಂಕೇಶ್ ಅವರಿಗೆ ಈ ಹಿಂದೆ ಹಲವು ಬಾರಿ ಜೀವ ಬೆದರಿಕೆ ಬಂದಿದ್ದ ಬಗ್ಗೆ ವರದಿಯಾಗಿದೆ.

ಸ್ನೇಹಿತೆ ಬಿ.ಟಿ. ನಾಯಕ್ ಜೊತೆ ತಮಗೆ ಜೀವ ಬೆದರಿಕೆ ಇರುವ ಬಗ್ಗೆ ಗೌರಿ ಲಂಕೇಶ್ ಒಂದು ತಿಂಗಳ ಹಿಂದೆಯೇ ಹೇಳಿಕೊಂಡಿದ್ದರಂತೆ. ಬಿ.ಟಿ. ಲಲಿತಾನಾಯಕ್ ಅವರಿಗೆ ಬೆದರಿಕೆ ಪತ್ರ ಬಂದಿದ್ದರ ಬಗ್ಗೆ ದೂರು ನೀಡಿದ್ದನ್ನ ಗೌರಿ ಮುಂದೆ ಪ್ರಸ್ತಾಪಿಸಿದ್ದರಂತೆ. ಪೊಲೀಸರಿಗೆ ದೂರು ಕೊಟ್ಟರೂ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ತೋಡಿಕೊಂಡಿದ್ದರಂತೆ. ಈ ಸಂದರ್ಭ ಗೌರಿ ಲಂಕೇಶ್ ಸಹ ತಮಗೆ ಬಂದಿದ್ದ ಬೆದರಿಕೆ ಕರೆ ಬಗ್ಗೆ ಹೇಳಿದ್ದರು. ಅನ್ಯಾಯದ ವಿರುದ್ಧ ಹೋರಾಡುವ ನಮ್ಮಂಥವರಿಗೆ ಬೆದರಿಕೆಗಳು ಸಾಮಾನ್ಯ. ಅದಕ್ಕೆ ತಲೆಕೆಡಿಸಿಕೊಂಡರೆ ಏನನ್ನೂ ಮಾಡಲು ಸಾಧ್ಯವಿಲ್ಲ ಎಂದಿದ್ದರಂತೆ.  

ಕಳೆದ ಕೆಲ ದಿನಗಳಿಂದ ದುಷ್ಕರ್ಮಿಗಳು ಗೌರಿ ಲಂಕೇಶ್ ಅವರನ್ನ ಹಿಂಬಾಲಿಸಿದ್ದರು ಎಂಬ ಬಗ್ಗೆ ಮಾಹಿತಿ ಲಭ್ಯವಾಗುತ್ತಿದೆ. ಸೆಪ್ಟೆಂಬರ್ 2ರಂದು ಗೃಹ ಸಚಿವ ರಾಮಲಿಂಗಗಾರೆಡ್ಡಿಗೆ ಕರೆ ಮಾಡಿ ಭೇಟಿಗೆ ಅವಕಾಶ ಕೇಳಿದ್ದರಂತೆ. ಸೋಮವಾರ ಭೇಟಿ ಮಾಡುವಂತೆ ಹೇಳಿದ್ದರಂತೆ. ಈ ಎಲ್ಲ ಸಂದರ್ಭ ಗಮನಿಸಿದರೆ ಗೌರಿ ಲಂಕೇಶ್ ಅವರನ್ನ ಹಲವು ದಿನಗಳನ್ನ ಫಾಲೋ ಮಾಡಿ ವ್ಯವಸ್ಥಿತವಾಗಿ ಕೊಂದಿರುವುದು ಸ್ಪಷ್ಟವಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ಜೈಪುರದಿಂದ ಪ್ರವಾಸಕ್ಕೆ ಬಂದಿದ್ದ ಎಂಟು ಯುವಕರು ಬನಾಸ್‌ ನದಿಯಲ್ಲಿ ಮುಳುಗಿ ದಾರುಣ ಸಾವು

Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

Indore Raja Raguvamshi Case: ಸೊಸೆಯ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ರಾಜ ರಘುವಂಶಿ ತಾಯಿ

Coastal Karnataka: ಕರಾವಳಿಯ ಮಳೆಗಾಲದ ಅತಿಥಿ ಕಲ್ಲಣಬೆಗೆ ಭಾರೀ ಡಿಮ್ಯಾಂಡ್‌

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಮುಂದಿನ ಸುದ್ದಿ
Show comments