Select Your Language

Notifications

webdunia
webdunia
webdunia
webdunia

ಗೌರಿ ಲಂಕೇಶ್‌ ಹಂತಕರ ಸುಳಿವು ಪತ್ತೆ: ಸಚಿವ ರಾಮಲಿಂಗಾರೆಡ್ಡಿ

ಗೌರಿ ಲಂಕೇಶ್‌ ಹಂತಕರ ಸುಳಿವು ಪತ್ತೆ: ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು , ಶನಿವಾರ, 9 ಸೆಪ್ಟಂಬರ್ 2017 (15:37 IST)
ದುಷ್ಕರ್ಮಿಗಳಿಂದ ಹತ್ಯೆಯಾದ ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹಂತಕರ ಸುಳಿವು ದೊರೆತಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಗೌರಿ ಲಂಕೇಶ್‌ ಹಂತಕರ ಸುಳಿವು ಪತ್ತೆಯಾಗಿದೆ. ಆದರೆ, ಮಾಧ್ಯಮಗಳ ಮುಂದೆ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
 
ಗೌರಿ ಲಂಕೇಶ್‌ ಹಂತಕರ ಬಗ್ಗೆ ಮಹತ್ವದ ಮಾಹಿತಿ ದೊರೆತಿದ್ದು, ಆದಷ್ಟು ಬೇಗ ತನಿಖೆ ಪೂರ್ಣಗೊಳ್ಳಲಿದೆ. ದಕ್ಷ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
 
ಆರೋಪಿಗಳ ಬಂಧನದ ನಂತರ ಯಾವ ಕಾರಣಕ್ಕಾಗಿ ಗೌರಿ ಲಂಕೇಶ್ ಅವರ ಹತ್ಯೆಯಾಗಿದೆ ಎನ್ನುವುದು ಬಹಿರಂಗವಾಗಲಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. 
 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಗೌರಿ ಲಂಕೇಶ್ ತಾಯಿಯಿಂದ ಸಿಎಂ ಸಿದ್ದರಾಮಯ್ಯ ಭೇಟಿ