Webdunia - Bharat's app for daily news and videos

Install App

ಗೌರಿ ಲಂಕೇಶ್ ಹತ್ಯೆ: ಮಾಜಿ ಭೂಗತ ದೊರೆ ಮುತ್ತಪ್ಪರೈ ಹೇಳಿಕೆ ದಾಖಲು

Webdunia
ಮಂಗಳವಾರ, 19 ಸೆಪ್ಟಂಬರ್ 2017 (20:37 IST)
ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಹೇಳಿಕೆ ದಾಖಲು ಮಾಡಿಕೊಂಡಿದ್ದಾರೆ ಎಂದು ಜಯ ಕರ್ನಾಟಕ ಸಂಘಟನೆಯ ಮುಖ್ಯಸ್ಥ ಮುತ್ತಪ್ಪ ರೈ ಹೇಳಿದ್ದಾರೆ.
ವಿಶೇಷ ತನಿಖಾ ತಂಡದ ಅಧಿಕಾರಿಗಳು ಇಂದು ಸಂಜೆ ನನ್ನ ಮನೆಗೆ ಆಗಮಿಸಿ ಹೇಳಿಕೆ ಪಡೆದಿದ್ದಾರೆ ಎಂದು ಮುತ್ತಪ್ಪ ರೈ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. 
 
ಗೌರಿ ಲಂಕೇಶ್‌ರೊಂದಿಗೆ ನನಗೆ ಯಾವುದೇ ಸಂಪರ್ಕವಿರಲಿಲ್ಲ. ಕಳೆದ 2003ರಲ್ಲಿ ನನ್ನ ವಿರುದ್ಧ ಲೇಖನ ಬರೆದಿದ್ದಕ್ಕಾಗಿ ನಾನು ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದೆ. ಅದರ ಹೊರತಾಗಿ ಅವರಿಗೂ ನನಗೂ ಯಾವುದೇ ಸಂಪರ್ಕವಿಲ್ಲ ಎಂದು ಸ್ಪಷ್ಟಪಡಿಸಿದ್ದಾಗಿ ಹೇಳಿದ್ದಾರೆ.
     
ನನ್ನ ತಾಯಿ ನಿಧನ ಹೊಂದಿದ್ದರಿಂದ ಧಾರ್ಮಿಕ ಕಾರ್ಯಗಳಿಂದಾಗಿ ನಾನು ಮಂಗಳೂರಿನಲ್ಲಿಯೇ ಇದ್ದೆ. ಗೌರಿ ಲಂಕೇಶ್ ಹತ್ಯೆ ನಡೆದಿದ್ದು ಅದೇ ದಿನ. ಆದರೆ, ಇದೀಗ ಎಸ್‌ಐಟಿ ಅಧಿಕಾರಿಗಳು ನನ್ನ ಹೇಳಿಕೆ ಪಡೆದಿದ್ದಾಗಿ ಜಯ ಕರ್ನಾಟಕ ಸಂಘಟನೆ ಮುಖ್ಯಸ್ಥ ಮುತ್ತಪ್ಪ ರೈ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments