ಗೌರಿ ಲಂಕೇಶ್ ಹತ್ಯೆ: ಮಾಜಿ ಭೂಗತ ದೊರೆ ಮುತ್ತಪ್ಪರೈ ಹೇಳಿಕೆ ದಾಖಲು

Webdunia
ಮಂಗಳವಾರ, 19 ಸೆಪ್ಟಂಬರ್ 2017 (20:37 IST)
ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಹೇಳಿಕೆ ದಾಖಲು ಮಾಡಿಕೊಂಡಿದ್ದಾರೆ ಎಂದು ಜಯ ಕರ್ನಾಟಕ ಸಂಘಟನೆಯ ಮುಖ್ಯಸ್ಥ ಮುತ್ತಪ್ಪ ರೈ ಹೇಳಿದ್ದಾರೆ.
ವಿಶೇಷ ತನಿಖಾ ತಂಡದ ಅಧಿಕಾರಿಗಳು ಇಂದು ಸಂಜೆ ನನ್ನ ಮನೆಗೆ ಆಗಮಿಸಿ ಹೇಳಿಕೆ ಪಡೆದಿದ್ದಾರೆ ಎಂದು ಮುತ್ತಪ್ಪ ರೈ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. 
 
ಗೌರಿ ಲಂಕೇಶ್‌ರೊಂದಿಗೆ ನನಗೆ ಯಾವುದೇ ಸಂಪರ್ಕವಿರಲಿಲ್ಲ. ಕಳೆದ 2003ರಲ್ಲಿ ನನ್ನ ವಿರುದ್ಧ ಲೇಖನ ಬರೆದಿದ್ದಕ್ಕಾಗಿ ನಾನು ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದೆ. ಅದರ ಹೊರತಾಗಿ ಅವರಿಗೂ ನನಗೂ ಯಾವುದೇ ಸಂಪರ್ಕವಿಲ್ಲ ಎಂದು ಸ್ಪಷ್ಟಪಡಿಸಿದ್ದಾಗಿ ಹೇಳಿದ್ದಾರೆ.
     
ನನ್ನ ತಾಯಿ ನಿಧನ ಹೊಂದಿದ್ದರಿಂದ ಧಾರ್ಮಿಕ ಕಾರ್ಯಗಳಿಂದಾಗಿ ನಾನು ಮಂಗಳೂರಿನಲ್ಲಿಯೇ ಇದ್ದೆ. ಗೌರಿ ಲಂಕೇಶ್ ಹತ್ಯೆ ನಡೆದಿದ್ದು ಅದೇ ದಿನ. ಆದರೆ, ಇದೀಗ ಎಸ್‌ಐಟಿ ಅಧಿಕಾರಿಗಳು ನನ್ನ ಹೇಳಿಕೆ ಪಡೆದಿದ್ದಾಗಿ ಜಯ ಕರ್ನಾಟಕ ಸಂಘಟನೆ ಮುಖ್ಯಸ್ಥ ಮುತ್ತಪ್ಪ ರೈ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments