Select Your Language

Notifications

webdunia
webdunia
webdunia
webdunia

ಗೌರಿ ಲಂಕೇಶ್ ಹಂತಕರು ಯಾರು ಎಂದು ತಿಳಿದಿದೆ: ರಾಮಲಿಂಗಾರೆಡ್ಡಿ

ಗೌರಿ ಲಂಕೇಶ್ ಹಂತಕರು ಯಾರು ಎಂದು ತಿಳಿದಿದೆ: ರಾಮಲಿಂಗಾರೆಡ್ಡಿ
ಚಿಕ್ಕಬಳ್ಳಾಪುರ , ಮಂಗಳವಾರ, 31 ಅಕ್ಟೋಬರ್ 2017 (19:35 IST)
ಚಿಕ್ಕಬಳ್ಳಾಪುರ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ತನಿಖೆ ಬಹುತೇಕ ಮುಗಿದಿದ್ದು, ಸದ್ಯದಲ್ಲೇ ಹಂತಕರನ್ನು ಬಂಧಿಸುತ್ತೇವೆ ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ನಡೆದ ಇಂದಿರಾ ನಮನ ಕಾರ್ಯಕ್ರಮದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ಈ ಹಿಂದೆ ಕೂಡ ಸಾಕಷ್ಟು ಬಾರಿ ಹೇಳಿದ್ದೇನೆ. ತನಿಖೆ ನಡೆದಿದ್ದು, ಹಂತಕರು ಯಾರು ಎಂದು ತಿಳಿದಿದೆ. ಶೀಘ್ರದಲ್ಲೇ ಆರೋಪಿಗಳು ಯಾರು ಎಂದು ಪ್ರಕಟಿಸುತ್ತೇವೆ. 100ಕ್ಕೆ 100ರಷ್ಟು ಹಂತಕರನ್ನು ಬಂಧಿಸುತ್ತೇವೆ. ಆರೋಪಿಗಳ ಬಂಧನಕ್ಕೆ ಇನ್ನೂ ಸ್ವಲ್ಪ ದಿನ ಕಾಯಬೇಕು ಎಂದರು.

ರಾಜ್ಯದ 30 ಜಿಲ್ಲೆಗಳಲ್ಲೂ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ಹಾಗೂ ಪೊಲೀಸ್ ಇಲಾಖೆ ಎಲ್ಲಾ ಅಗತ್ಯ ಕ್ರಮಗಳನ್ನ ಕೈಗೊಂಡಿದೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಬಿಎಸ್‌ವೈ 84 ದಿನಗಳ ಯಾತ್ರೆಗೆ ಚಾಲನೆ ನೀಡಲಿರುವ ಅಮಿತ್ ಶಾ