ಗೌರಿ ಹತ್ಯೆ ಪ್ರಕರಣ: ಬಂಧಿತರ ಬಿಡುಗಡೆಗೆ ಆಗ್ರಹ

Webdunia
ಬುಧವಾರ, 1 ಆಗಸ್ಟ್ 2018 (13:54 IST)
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್‍ಐಟಿ) ಬಂಧಿಸಿರುವ ಹುಬ್ಬಳ್ಳಿಯ ಗಣೇಶ ಮಿಸ್ಕಿನ್ ಹಾಗೂ ಅಮಿತ್ ಬದ್ದಿ ಅಮಾಯಕರಾಗಿದ್ದು, ಈ ಕೂಡಲೇ ಅವರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಎಸ್‍ಎಸ್‍ಕೆ ಸಮಾಜ ವತಿಯಿಂದ  ಬೃಹತ್ ಮೌನ ಮೆರವಣಿಗೆ ನಡೆಯಿತು.

ಗಣೇಶ ಮಿಸ್ಕಿನ್ ಹಾಗೂ ಅಮಿತ್ ಬದ್ದಿ ಸಮಾಜದ ಯುವಕರಾಗಿರಾಗಿದ್ದು, ಗೌರಿ ಲಂಕೇಶ್ ಹತ್ಯೆಯಲ್ಲಿ ಯಾವುದೇ ರೀತಿಯ ಪಾಲ್ಗೊಂಡಿಲ್ಲ. ಆದ್ದರಿಂದ ಇವರನ್ನು ಕೂಡಲೇ ಈ ಪ್ರಕರಣ ದಿಂದ ಕೈಬಿಡಬೇಕು ಎಂದು ಒತ್ತಾಯಿಸಿ ಜಸ್ಟಿಸ್ ಫಾರ್ ಅಮಿತ್ ಬದ್ದಿ, ಗಣೇಶ್ ಮಿಸ್ಕಿನ್' ಅಭಿಯಾನದಡಿ ಎಸ್‍ಎಸ್‍ಕೆ ಸಮಾಜದ ಮುಖಂಡರ ಜಾಗೃತಿ ಅಭಿಯಾನ  ಮೂಡಿಸಿದರು.

ಅಮಾಯಕ ಯುವಕರನ್ನು ಸುಖಾಸುಮ್ಮನೆ ಅಪರಾಧಿ ಎಂದು ಬಿಂಬಿಸುತ್ತಿರುವುದು ಖಂಡನೀಯವಾಗಿದ್ದು, ಕುಟುಂಬದವರಿಗೆ ಏನನ್ನೂ ತಿಳಿಸದೇ ಏಕಾಏಕಿ ಬಂಧಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ  ಎಂದು ಸಂಘದ  ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.

ದಾಜಿಬಾನಪೇಟೆಯ ತುಳಜಾ ಭವಾನಿ ದೇವಸ್ಥಾನದಿಂದ ಮಿನಿವಿಧಾನಸೌಧಕ್ಕೆ ತೆರಳಿ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮಗನೇ ಚಿನ್ನ ಕದ್ದಿದ್ದು ಎಂದಿದ್ದಕ್ಕೆ ಜೀವನೇ ತೆಗೆದ್ಬಿಟ್ಟ

ಇವರಿಗಿಂತ, ಇಂದಿರಾ ಗಾಂಧಿಗೆ ಧೈರ್ಯ ಜಾಸ್ತಿಯಾಗಿತ್ತು: ರಾಹುಲ್ ಗಾಂಧಿ ಕಿಡಿ

ಮಗಳ ಶವ ಮುಂದಿಟ್ಟು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ಬೆನ್ನಲ್ಲೇ ಪೊಲೀಸರಿಗೆ ಶಾಕ್‌

ಡೆಹ್ರಾಡೂನ್‌ನಲ್ಲಿ ಮೂರು ಆಭರಣ ಬಿಟ್ಟು ಬೇರೆ ಧರಿಸಿದ್ರೆ ಬೀಳುತ್ತೆ ₹50ಸಾವಿರ ದಂಡ

ಬಿಜೆಪಿ ಶಾಸಕ ರವಿಕುಮಾರ್ ಸಿಎಂ ಕಾರಿನಲ್ಲಿ ಇದ್ದಿದ್ದು ಯಾಕೆ: ನಿಜ ಕಾರಣ ಬಯಲು

ಮುಂದಿನ ಸುದ್ದಿ
Show comments