DGP Om Prakash murder: ಮೀನು ಊಟ ಮಾಡುತ್ತಿರುವಾಗಲೇ ಓಂ ಪ್ರಕಾಶ್ ಮೇಲೆ ನಡೆದಿತ್ತು ಡೆಡ್ಲೀ ಅಟ್ಯಾಕ್

Krishnaveni K
ಸೋಮವಾರ, 21 ಏಪ್ರಿಲ್ 2025 (14:58 IST)
ಬೆಂಗಳೂರು: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಸಾವಿನ ಬಗ್ಗೆ ಒಂದೊಂದೇ ಸತ್ಯಗಳು ಈಗ ಬಹಿರಂಗವಾಗುತ್ತಿದೆ. ಕೊಲೆ ಆರೋಪದಲ್ಲಿ ಪತ್ನಿ ಪಲ್ಲವಿಯನ್ನು ಅರೆಸ್ಟ್ ಮಾಡಲಾಗಿದೆ. ಮಗಳನ್ನೂ ವಶಕ್ಕೆ ಪಡೆಯಲಾಗಿದೆ. ಇದೀಗ ಬಂದಿರುವ ಮಾಹಿತಿ ಪ್ರಕಾರ ಊಟ ಮಾಡುತ್ತಿರುವಾಗಲೇ ಓಂ ಪ್ರಕಾಶ್ ಮೇಲೆ ಡೆಡ್ಲೀ ಅಟ್ಯಾಕ್ ನಡೆದಿತ್ತು ಎನ್ನಲಾಗಿದೆ.

ಓಂ ಪ್ರಕಾಶ್ ಕೊಲೆಯಾಗುವ ಸಂದರ್ಭದಲ್ಲಿ ಊಟ ಮಾಡುತ್ತಿದ್ದರು ಎಂಬುದಕ್ಕೆ ಕುರುಹುಗಳು ಸಿಕ್ಕಿವೆ. ಡೈನಿಂಗ್ ಟೇಬಲ್ ಮೇಲೆ ಊಟದ ತಟ್ಟೆ ಹಾಗೆಯೇ ಇತ್ತು. ಊಟ ಮಾಡುತ್ತಿರುವಾಗಲೇ ಜಗಳ ವಿಕೋಪಕ್ಕೆ ತಿರುಗಿದೆ ಎನ್ನಲಾಗಿದೆ.

ಓಂ ಪ್ರಕಾಶ್ ಮೀನು ತರಿಸಿಕೊಂಡಿದ್ದರು. ಮೀನಿನ ಊಟ ಮಾಡುತ್ತಿರುವಾಗಲೇ ಅವರ ಕಣ್ಣಿಗೆ ಖಾರದ ಪುಡಿ ಎರಚಲಾಗಿದೆ. ಬಳಿಕ ಅಡುಗೆ ಮನೆಯಲ್ಲಿದ್ದ ಚಾಕುವಿನಿಂದ ಇರಿಯಲಾಗಿದೆ. ಅಲ್ಲದೆ, ಬಿಯರ್ ಬಾಟಲಿಯಿಂದಲೂ ಚುಚ್ಚಲಾಗಿದೆ ಎಂಬುದಕ್ಕೆ ಕುರುಹಾಗಿ ಒಡೆದ ಬಿಯರ್ ಬಾಟಲಿಗಳು ಸಿಕ್ಕಿವೆ. ಓಂ ಪ್ರಕಾಶ್ ಮೃತದೇಹ ಡೈನಿಂಗ್ ಹಾಲ್ ನಲ್ಲೇ ಇತ್ತು.

ಕೊಲೆ ಮಾಡಿದ ಬಳಿಕ ಪತ್ನಿ ಪಲ್ಲವಿ ಮತ್ತು ಮಗಳು ಕೃತಿ ಮಹಡಿಯಲ್ಲಿರುವ ಕೊಠಡಿಗೆ ಹೋಗಿ ಪೊಲೀಸರಿಗೆ ಕರೆ ಮಾಡಿದ್ದಾರೆ. ಪೊಲೀಸರು ಬಂದಾಗ ಮೊದಲು ಮಗಳು ಕೃತಿ ಬಾಗಿಲು ತೆಗೆಯಲು ಕಿರಿಕ್ ಮಾಡಿದ್ದಾಳೆ. ಬಳಿಕ ಪೊಲೀಸರು ಬಾಗಿಲು ಒಡೆದು ಒಳ ಹೋಗಿದ್ದಾರೆ ಎನ್ನಲಾಗಿದೆ. ಇನ್ನು, ಯಾರು ಕೊಲೆ ಮಾಡಿದ್ದು ಎಂದು ಪ್ರಶ್ನಿಸಿದಾಗ ನಾನೇ ಕೊಲೆ ಮಾಡಿದ್ದು ಎಂದು ಪಲ್ಲವಿ ಒಪ್ಪಿಕೊಂಡಿದ್ದರು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವಂಬರ್ 18 ಕ್ಕೆ ಪ್ರಮಾಣವಚನ ಮಾಡ್ತೀನಿ ಎಂದಿದ್ದ ತೇಜಸ್ವಿ ಯಾದವ್ ಗೆ ಸೋಲಾಗಲು ತಂದೆಯೇ ಕಾರಣನಾ

Bihar Election result 2025: ಬಿಹಾರದ ಇಂದಿನ ಫಲಿತಾಂಶವನ್ನು ಮೊದಲೇ ಭವಿಷ್ಯ ನುಡಿದಿದ್ದ ಅಮಿತ್ ಶಾ video

ವೃಕ್ಷ ಮಾತೆ, ಶತಾಯುಷಿ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

ಮಹಾಘಟಬಂಧನದ ಸಿಎಂ ಅಭ್ಯರ್ಥಿಯಾದ ತೇಜಸ್ವಿ ಯಾದವ್ ಸ್ಥಿತಿ ಶಾಕಿಂಗ್

ಮತ್ತೊಮ್ಮೆ ಸೋತ ರಾಹುಲ್ ಗಾಂಧಿಗೆ ಅಭಿನಂದನೆ, ಕರ್ನಾಟಕದಲ್ಲೂ ಹೀಗೇ ಆಗುತ್ತೆ: ಆರ್ ಅಶೋಕ್

ಮುಂದಿನ ಸುದ್ದಿ
Show comments