ಸಚಿವ ಜಾರ್ಜ್‌ಗೆ ತನಿಖೆಗೆ ಮುನ್ನವೇ ಕ್ಲೀನ್ ಚಿಟ್: ಕುಮಾರಸ್ವಾಮಿ ಕಿಡಿ

Webdunia
ಬುಧವಾರ, 15 ನವೆಂಬರ್ 2017 (13:25 IST)
ಡಿವೈಎಸ್‌ಪಿ ಎಂ.ಕೆ.ಗಣಪತಿ ಪ್ರಕರಣದಲ್ಲಿ ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಅವಸರದಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಸರಕಾರದ ಒತ್ತಡದಿಂದಾಗಿ ಸಿಐಡಿ ಅಧಿಕಾರಿಗಳು ಸಚಿವ ಜಾರ್ಜ್‌ಗೆ ಕ್ಲೀನ್ ಚಿಟ್ ನೀಡಿದ್ದಾರೆ ಎನ್ನುವುದು ಸಿಬಿಐ ತನಿಖೆಯಲ್ಲಿ ಬಹಿರಂಗವಾಗಿದೆ. ಗಣಪತಿ ಆತ್ಮಹತ್ಯೆ ಮಾಡಿಕೊಂಡ ಕೋಣೆಯನ್ನು ಸಿಬಿಐ ಅಧಿಕಾರಿಗಳು ತನಿಖೆ ನಡೆಸಿದಾಗ ಬುಲೆಟ್ ಪತ್ತೆಯಾಗಿರುವುದು ಕಂಡುಬಂದಿದೆ ಎಂದರು.
 
ಹಿಂದೆ ಸಿಐಡಿ ಅಧಿಕಾರಿಗಳು ಯಾವ ರೀತಿ ಕೋಣೆಯನ್ನು ಮಹಜರು ಮಾಡಿದ್ದರು ಎನ್ನುವುದಕ್ಕೆ ಸಿಬಿಐ ತನಿಖೆಯಲ್ಲಿ ಸಿಕ್ಕ ಬುಲೆಟ್ ಸಾಕ್ಷಿಯಾಗಿದೆ. ಎಂತಹ ಅವಸರದಲ್ಲಿ ತನಿಖೆ ಮಾಡಿದ್ದರು ಎನ್ನುವುದು ಸಾಬೀತಾಗುತ್ತದೆ ಎಂದರು.
 
ಸರಕಾರ ಪ್ರಕರಣದಲ್ಲಿರುವ ಆರೋಪಿಗಳ ಸಾಕ್ಷ್ಯಗಳನ್ನು ಮುಚ್ಚಿಹಾಕಲು ಸಿಐಡಿ ಅಧಿಕಾರಿಗಳನ್ನು ಬಳಸಿಕೊಂಡಿತೆ ಎನ್ನುವ ಅನುಮಾನ ಎಲ್ಲರಲ್ಲಿ ಕಾಡುತ್ತಿದೆ. ಸರಕಾರಕ್ಕೆ ಇದರಿಂದ ನಾಚಿಕೆಯಾಗಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಏನೂ ಅರಿಯದ 9ರ ಬಾಲಕಿ ಮೇಲೆ ಮೈಮುಟ್ಟಿ ವಿಕೃತಿ ಮೆರೆದ ಮುದುಕನ ಕತೆ ಮುಗಿಸಿದ ಸ್ಥಳೀಯರು, Video

Karnataka Weather: ರಾಜ್ಯದಲ್ಲಿ ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಪತಿ ಪ್ರಧಾನಿಯಾದರು ಬದಲಾಗದ ಚೆನ್ನಮ್ಮ ಸರಳತೆ, ದೇವೇಗೌಡರ ಕಷ್ಟಕ್ಕೆ ಚಿನ್ನವನ್ನು ಅಡವಿಟ್ಟಿದ್ದರಂತ್ತೆ

ಅಬ್ಬ ಈ ವಿಡಿಯೋ ನೋಡುವಾಗ ಎದೆ ಝಳ್ ಎನಿಸುತ್ತದೆ: ಜಿಪ್‌ಲೈನ್ ಆಡುವಾಗ ತುಂಡಾದ ಹಗ್ಗ, 40 ಅಡಿ ಎತ್ತರದಿಂದ ಬಿದ್ದ ಯುವಕ

ಮುಂದಿನ ಸುದ್ದಿ
Show comments