Webdunia - Bharat's app for daily news and videos

Install App

ಸಚಿವ ಜಾರ್ಜ್‌ಗೆ ತನಿಖೆಗೆ ಮುನ್ನವೇ ಕ್ಲೀನ್ ಚಿಟ್: ಕುಮಾರಸ್ವಾಮಿ ಕಿಡಿ

Webdunia
ಬುಧವಾರ, 15 ನವೆಂಬರ್ 2017 (13:25 IST)
ಡಿವೈಎಸ್‌ಪಿ ಎಂ.ಕೆ.ಗಣಪತಿ ಪ್ರಕರಣದಲ್ಲಿ ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಅವಸರದಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಸರಕಾರದ ಒತ್ತಡದಿಂದಾಗಿ ಸಿಐಡಿ ಅಧಿಕಾರಿಗಳು ಸಚಿವ ಜಾರ್ಜ್‌ಗೆ ಕ್ಲೀನ್ ಚಿಟ್ ನೀಡಿದ್ದಾರೆ ಎನ್ನುವುದು ಸಿಬಿಐ ತನಿಖೆಯಲ್ಲಿ ಬಹಿರಂಗವಾಗಿದೆ. ಗಣಪತಿ ಆತ್ಮಹತ್ಯೆ ಮಾಡಿಕೊಂಡ ಕೋಣೆಯನ್ನು ಸಿಬಿಐ ಅಧಿಕಾರಿಗಳು ತನಿಖೆ ನಡೆಸಿದಾಗ ಬುಲೆಟ್ ಪತ್ತೆಯಾಗಿರುವುದು ಕಂಡುಬಂದಿದೆ ಎಂದರು.
 
ಹಿಂದೆ ಸಿಐಡಿ ಅಧಿಕಾರಿಗಳು ಯಾವ ರೀತಿ ಕೋಣೆಯನ್ನು ಮಹಜರು ಮಾಡಿದ್ದರು ಎನ್ನುವುದಕ್ಕೆ ಸಿಬಿಐ ತನಿಖೆಯಲ್ಲಿ ಸಿಕ್ಕ ಬುಲೆಟ್ ಸಾಕ್ಷಿಯಾಗಿದೆ. ಎಂತಹ ಅವಸರದಲ್ಲಿ ತನಿಖೆ ಮಾಡಿದ್ದರು ಎನ್ನುವುದು ಸಾಬೀತಾಗುತ್ತದೆ ಎಂದರು.
 
ಸರಕಾರ ಪ್ರಕರಣದಲ್ಲಿರುವ ಆರೋಪಿಗಳ ಸಾಕ್ಷ್ಯಗಳನ್ನು ಮುಚ್ಚಿಹಾಕಲು ಸಿಐಡಿ ಅಧಿಕಾರಿಗಳನ್ನು ಬಳಸಿಕೊಂಡಿತೆ ಎನ್ನುವ ಅನುಮಾನ ಎಲ್ಲರಲ್ಲಿ ಕಾಡುತ್ತಿದೆ. ಸರಕಾರಕ್ಕೆ ಇದರಿಂದ ನಾಚಿಕೆಯಾಗಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments