Webdunia - Bharat's app for daily news and videos

Install App

ಮೈತ್ರಿ ನಡುವೆ ಮಧ್ಯಂತರ ಚುನಾವಣೆ ತಯಾರಿ ಶುರು?

Webdunia
ಗುರುವಾರ, 27 ಜೂನ್ 2019 (19:04 IST)
ರಾಜ್ಯದ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಪಕ್ಷಗಳ ನಡುವೆ ಮಧ್ಯಂತರ ಚುನಾವಣೆಗೆ ತಯಾರಿ ಶುರುವಾಗಿದೆಯಾ? ಹೀಗೊಂದು ಚರ್ಚೆ ಇದೀಗ ಶುರುವಾಗಿದೆ.

ದೋಸ್ತಿ ಪಕ್ಷಗಳ ನಡುವೆ ಶುರುವಾಯ್ತಾ ಮಧ್ಯಂತರ ತಯಾರಿ...? ಎನ್ನುವ ಚರ್ಚೆ ಆರಂಭಗೊಂಡಿದೆ. ಅತ್ತ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ನಡೆಸುತ್ತಿದ್ದರೆ, ಇತ್ತ ಸಿದ್ದರಾಮಯ್ಯ ಅಹಿಂದ ಸಮಾವೇಶ ಆಯೋಜಿಸುತ್ತಿದ್ದಾರೆ.

ಅಹಿಂದ ಸಮಾವೇಶಕ್ಕೆ ಚಾಲನೆ ನೀಡುತ್ತಿದ್ದಾರೆ ಮಾಜಿ ಸಿಎಂ ಸಿದ್ದರಾಮಯ್ಯ. ಮೈಸೂರಿನಿಂದಲೇ ಮೊದಲ ಅಹಿಂದ ಸಮಾವೇಶ ಆರಂಭಿಸಲು ಚಿಂತನೆ ನಡೆದಿದೆ. ನಂತರ ರಾಜ್ಯದ 4 ಕಡೆ ಅಹಿಂದ ಸಮಾವೇಶಕ್ಕೆ ಸಿದ್ಧತೆ ನಡೆಯಲಿವೆ.
ಹಳೆ ಮೈಸೂರು ಭಾಗಕ್ಕೆ ಮೊದಲ ಪ್ರಾಶಸ್ತ್ಯ ನೀಡಲಾಗಿದೆ. ಈ ಭಾಗದಲ್ಲಿ ಕೈ  ಮತಗಳನ್ನೆಲ್ಲ‌ ಜೆಡಿಎಸ್ ಸೆಳೆದುಕೊಂಡಿದೆ.

ಇದನ್ನು ವಾಪಸ್ ಪಡೆಯಬೇಕೆಂದರೆ ಅಹಿಂದ ಸಮಾವೇಶ ನಡೆಸಬೇಕು. ಹಳೆ ಮೈಸೂರು ಭಾಗದಿಂದಲೇ ಅಹಿಂದ ಮತಗಳ ಕ್ರೋಢೀಕರಣವಾಗಬೇಕು. ಮೈತ್ರಿಯಿಂದ ಆಗಿರುವ ನಷ್ಟವನ್ನು ಭರ್ತಿ ಮಾಡಿಕೊಳ್ಳಬಹುದು ಎಂಬ ಲೆಕ್ಕಾಚಾರದಲ್ಲಿ ಕೈ ಪಡೆ ನಾಯಕರು ಮುಳುಗಿದ್ದಾರೆ. ಈ ನಿಟ್ಟಿನಲ್ಲಿ ಚಿಂತನೆ ನಡೆಸಿರುವ ಸಿದ್ದರಾಮಯ್ಯ, ಬೆಳಗಾವಿ, ಹುಬ್ಬಳ್ಳಿ, ಕಲಬುರಗಿ ಭಾಗಗಳಲ್ಲಿಯೂ ಅಹಿಂದ ಸಮಾವೇಶ ನಡೆಸಲಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments