Webdunia - Bharat's app for daily news and videos

Install App

ಮೈತ್ರಿ ನಡುವೆ ಮಧ್ಯಂತರ ಚುನಾವಣೆ ತಯಾರಿ ಶುರು?

Webdunia
ಗುರುವಾರ, 27 ಜೂನ್ 2019 (19:04 IST)
ರಾಜ್ಯದ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಪಕ್ಷಗಳ ನಡುವೆ ಮಧ್ಯಂತರ ಚುನಾವಣೆಗೆ ತಯಾರಿ ಶುರುವಾಗಿದೆಯಾ? ಹೀಗೊಂದು ಚರ್ಚೆ ಇದೀಗ ಶುರುವಾಗಿದೆ.

ದೋಸ್ತಿ ಪಕ್ಷಗಳ ನಡುವೆ ಶುರುವಾಯ್ತಾ ಮಧ್ಯಂತರ ತಯಾರಿ...? ಎನ್ನುವ ಚರ್ಚೆ ಆರಂಭಗೊಂಡಿದೆ. ಅತ್ತ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ನಡೆಸುತ್ತಿದ್ದರೆ, ಇತ್ತ ಸಿದ್ದರಾಮಯ್ಯ ಅಹಿಂದ ಸಮಾವೇಶ ಆಯೋಜಿಸುತ್ತಿದ್ದಾರೆ.

ಅಹಿಂದ ಸಮಾವೇಶಕ್ಕೆ ಚಾಲನೆ ನೀಡುತ್ತಿದ್ದಾರೆ ಮಾಜಿ ಸಿಎಂ ಸಿದ್ದರಾಮಯ್ಯ. ಮೈಸೂರಿನಿಂದಲೇ ಮೊದಲ ಅಹಿಂದ ಸಮಾವೇಶ ಆರಂಭಿಸಲು ಚಿಂತನೆ ನಡೆದಿದೆ. ನಂತರ ರಾಜ್ಯದ 4 ಕಡೆ ಅಹಿಂದ ಸಮಾವೇಶಕ್ಕೆ ಸಿದ್ಧತೆ ನಡೆಯಲಿವೆ.
ಹಳೆ ಮೈಸೂರು ಭಾಗಕ್ಕೆ ಮೊದಲ ಪ್ರಾಶಸ್ತ್ಯ ನೀಡಲಾಗಿದೆ. ಈ ಭಾಗದಲ್ಲಿ ಕೈ  ಮತಗಳನ್ನೆಲ್ಲ‌ ಜೆಡಿಎಸ್ ಸೆಳೆದುಕೊಂಡಿದೆ.

ಇದನ್ನು ವಾಪಸ್ ಪಡೆಯಬೇಕೆಂದರೆ ಅಹಿಂದ ಸಮಾವೇಶ ನಡೆಸಬೇಕು. ಹಳೆ ಮೈಸೂರು ಭಾಗದಿಂದಲೇ ಅಹಿಂದ ಮತಗಳ ಕ್ರೋಢೀಕರಣವಾಗಬೇಕು. ಮೈತ್ರಿಯಿಂದ ಆಗಿರುವ ನಷ್ಟವನ್ನು ಭರ್ತಿ ಮಾಡಿಕೊಳ್ಳಬಹುದು ಎಂಬ ಲೆಕ್ಕಾಚಾರದಲ್ಲಿ ಕೈ ಪಡೆ ನಾಯಕರು ಮುಳುಗಿದ್ದಾರೆ. ಈ ನಿಟ್ಟಿನಲ್ಲಿ ಚಿಂತನೆ ನಡೆಸಿರುವ ಸಿದ್ದರಾಮಯ್ಯ, ಬೆಳಗಾವಿ, ಹುಬ್ಬಳ್ಳಿ, ಕಲಬುರಗಿ ಭಾಗಗಳಲ್ಲಿಯೂ ಅಹಿಂದ ಸಮಾವೇಶ ನಡೆಸಲಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments