Webdunia - Bharat's app for daily news and videos

Install App

ಖತರ್ನಾಕ್ ಪುಂಡರ ಗ್ಯಾಂಗ್: ಇವರೇನು ಮಾಡ್ತಿದ್ದರು ಗೊತ್ತಾ?

Webdunia
ಸೋಮವಾರ, 21 ಜನವರಿ 2019 (16:49 IST)
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಹಾಯಾಗಿ ತಿರುಗಾಡುತ್ತಿದ್ದ ಖತರ್ನಾಕ್ ಪುಂಡರ ಗ್ಯಾಂಗ್ ಬಂಧನ ಮಾಡಲಾಗಿದೆ.

ರಾಜಧಾನಿ ಸೇರಿದಂತೆ ಸುತ್ತಲಿನ ಪ್ರದೇಶಗಳಲ್ಲಿ ಜನರ ನಿದ್ದೆಗೆಡಿಸಿದ್ದ ಖತರ್ನಾಕ್ ಪುಂಡರು ಈಗ ಕಂಬಿ ಹಿಂದೆ ಸರಿದಿದ್ದಾರೆ.
ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ  ಬೇಕಾಗಿದ್ದ ಗ್ಯಾಂಗ್ ಕೊನೆಗೂ ಖಾಕಿ ಪಡೆ ಹೆಣೆದ ಬಲೆಯಲ್ಲಿ ಸಿಲುಕಿ ಬಂಧನಕ್ಕೆ ಒಳಗಾಗಿದೆ. ಬಂಧಿತರಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ಮಗನೂ ಸೇರಿದ್ದಾನೆ.

ಆನೇಕಲ್ ಜನತೆಗೆ ನಿದ್ದೆಗೆಡಿಸಿದ ಆರೋಪಿಗಳನ್ನು ಹೆಡೆಮುರಿ ಕಟ್ಟಿ ಬಂಧಿಸುವಲ್ಲಿ ಆನೇಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾರ್ಯಚರಣೆ ನಡೆಸಿ ಮೂರು ಜನ ಆರೋಪಿಗಳನ್ನು ಬಂಧನ ಮಾಡಿದ್ದಾರೆ.

ಮನೋಜ್ , ಸೂರ್ಯತೇಜ್ , ತೇಜಸ್ ಬಂಧಿತ ಆರೋಪಿಗಳಾಗಿದ್ದಾರೆ. 
ಕಳೆದ ಕೆಲವು ದಿನಗಳ ಹಿಂದೆ ಆನೇಕಲ್ ನ ಅಲಯನ್ಸ್ ಕಾಲೇಜಿನ‌ ಮುಂಭಾಗದ ಫುಡ್ ಕ್ಲಬ್ ನಲ್ಲಿ ದಾಂಧಲೆ ಸೃಷ್ಟಿ ಸಿದ್ದ  ಗ್ಯಾಂಗ್ ಇದಾಗಿತ್ತು. ಮದ್ಯಪಾನ ಸೇವಿಸಿ ಪುಡ್ ಕ್ಲಬ್ ನಲ್ಲಿ ಕಂಠಪೂರ್ತಿ ತಿಂದು ಬಿಲ್ ಕೇಳಿದ್ದಕ್ಕೆ ಹೋಟಲ್ ಮಾಲೀಕನಿಗೆ ಚಾಕುವಿನಿಂದ ಚುಚ್ಚಿ ಪರಾರಿ‌ಯಾಗಿದ್ದರು.

 ಕ್ಷುಲ್ಲಕ‌ ಕಾರಣಕ್ಕೆ ಗಲಾಟೆ ಮಾಡಿ,‌ ಎಲ್ಲೆಂದರಲ್ಲಿ ಅಮಾಯಕರಿಗೆ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗುತ್ತಿದ್ದರು.
ಆನೇಕಲ್ ಸುತ್ತಮುತ್ತಲಿನ ಹಲವು ಪೊಲೀಸ್ ಠಾಣೆಗೆ ಬೇಕಾಗಿದ್ದ ಗ್ಯಾಂಗ್ ಇದಾಗಿತ್ತು.

ಈ ಹಿಂದೆಯು ಸಹ ಕೊಲೆ ಯತ್ನ ಪ್ರಕರಣದಲ್ಲಿ ಆರೋಪಿಗಳು ಜೈಲು ಸೇರಿದ್ದರು. ನಂತರ ಬೇಲ್ ಮೇಲೆ ಹೊರ ಬಂದು ಮತ್ತೆ ಸಿಕ್ಕ ಸಿಕ್ಕ ಕಡೆಗಳಲ್ಲಿ ಹಲ್ಲೆ ನಡೆಸಿ ಗಲಾಟೆ ಮಾಡುತ್ತಿದ್ದರು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments