Webdunia - Bharat's app for daily news and videos

Install App

ತಾಯಿಗೆ ಟೋಪಿ ಹಾಕಿ ಮಗಳು ಎಸ್ಕೇಪ್: ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್

Webdunia
ಶನಿವಾರ, 13 ನವೆಂಬರ್ 2021 (21:42 IST)
fir

ಬೆಂಗಳೂರು: ಕೋಟಿ ರೂಪಾಯಿ ಬೆಲೆ ಬಾಳುವ ಚಿನ್ನಾಭರಣ ವಂಚಿಸಿದ ಆರೋಪದ ಮೇಲೆ ತಾಯಿಯೇ ಮಗಳ ಮೇಲೆ ದೂರು ದಾಖಲಿಸಿರುವ ಘಟನೆ ರಾಜಧಾನಿಯ ಜೆಪಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
 
ಸುಮಾರು 4 ಕೋಟಿ ಮೌಲ್ಯದ 7.5 ಕೆಜಿ ವಜ್ರ ಹಾಗೂ ಚಿನ್ನಾಭರಣ ವಂಚಿಸಿದ್ದಾಳೆ ಎಂದು ಮಗಳ ವಿರುದ್ಧವೇ ತಾಯಿ ದೂರು ನೀಡಿದ್ದಾರೆ.ಈ ಸಂಬಂಧ  ಜೆ.ಪಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌.ಐ.ಆರ್ ದಾಖಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ವಿಜಯಲಕ್ಷ್ಮಿ ಎನ್ನುವವರು ಮಗಳು ತೇಜವಂತಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ವಿಜಯಲಕ್ಷ್ಮಿ ಕೆಲ ದಿನಗಳ ಹಿಂದೆ ಶಸ್ತ್ರಚಿಕಿತ್ಸೆ ಗೆ ಒಳಗಾಗಿದ್ದರು. ಈ ವೇಳೆ ಮನೆಗೆ ಬಂದಿದ್ದ ತೇಜವಂತಿ ಲಾಕರ್‌ನಲ್ಲಿ ಸುರಕ್ಷಿತವಾಗಿ ಇಡುವುದಾಗಿ ಹೇಳಿ ಚಿನ್ನ ತೆಗೆದುಕೊಂಡು ಹೋಗಿದ್ದಳು. ಆದರೆ ಚಿನ್ನ ತೆಗೆದುಕೊಂಡು ಹೋದ ನಂತರ ತೇಜವಂತಿ ನಾಪತ್ತೆಯಾಗಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದಿದ್ದಾರೆ.
 
ಈ ಕುರಿತು ವಿಜಯಲಕ್ಷ್ಮಿ ದಕ್ಷಿಣ ವಿಭಾಗದ  ಜೆ.ಪಿ ನಗರ ಠಾಣೆಗೆ ದೂರು ನೀಡಿದ್ದಾರೆ. ಭಾರತೀಯ ದಂಡಸಂಹಿತೆಯ ಸೆಕ್ಷನ್ 420ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಮಗಳು ತೇಜವಂತೆ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy: ಹರಿದ ಬಟ್ಟೆ, ಕೈಯಿಂದ ಎದೆ ಮುಚ್ಚಿಕೊಂಡಿದ್ದ ಯುವತಿ: ಚಿನ್ನಸ್ವಾಮಿಯಲ್ಲಿ ನಡೆದ ಶಾಕಿಂಗ್ ಘಟನೆಯಿದು

Rahul Gandhi: ಸರೆಂಡರ್ ಆಗಿದ್ದು ನೆಹರೂ, ನರೇಂದ್ರ ಅಲ್ಲ: ರಾಹುಲ್ ಗಾಂಧಿಗೆ ನೆಟ್ಟಿಗರಿಂದ ತಿರುಗೇಟು

ಕುಮಾರಸ್ವಾಮಿ ಕಣ್ಣೀರನ್ನು ವ್ಯಂಗ್ಯ ಮಾಡಿದ್ದ ಡಿಕೆಶಿ: ಈಗ ನಿಖಿಲ್ ಕುಮಾರಸ್ವಾಮಿ ಕೊಟ್ರು ಟಾಂಗ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಆರ್ ಸಿಬಿ ವಿರುದ್ಧವೇ ಕೇಸ್

ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

ಮುಂದಿನ ಸುದ್ದಿ
Show comments