Webdunia - Bharat's app for daily news and videos

Install App

ಮದುವೆಗೆ ನಿರಾಕರಿಸಿದ ಯುವತಿಯನ್ನ ಚಾಕುವಿನಿಂದ ಚುಚ್ಚಿ ಕೊಂದ ಪಾಗಲ್ ಪ್ರೇಮಿ

Webdunia
ಮಂಗಳವಾರ, 11 ಏಪ್ರಿಲ್ 2017 (15:23 IST)
ಮದುವೆಗೆ ನಿರಾಕರಿಸಿದ ಯುವತಿಗೆ ಪಾಗಲ್ ಪ್ರೇಮಿಯೊಬ್ಬ ಚಾಕುವಿನಿಂದ ಚುಚ್ಚಿ ಕೊಂದಿರುವ ಘಟನೆ ಬೆಂಗಳೂರಿನ ಮೈಸೂರು ರಸ್ತೆಯ ದೀಪಾಂಜಲಿನಗರದಲ್ಲಿ ನಡೆದಿದೆ. ಹತ್ಯೆಯಾದ ಯುವತಿಯನ್ನ ಶೋಭಾ ಎಂದು ಗುರ್ತಿಸಲಾಗಿದೆ.

ತನ್ನನ್ನ ಮದುವೆಯಾಗುವಂತೆ ಶೋಭಾಳನ್ನ ಪೀಡಿಸುತ್ತಿದ್ದ ಪಕ್ಕದ ಮನೆಯ ಗಿರೀಶ್ ಎಂಬಾತ ಇವತ್ತು ಸಹ ಜಗಳ ತೆಗೆದಿದ್ದಾನೆ. ಯುವತಿ ನಿರಾಕರಿಸಿದಾಗ ಚಾಕುವಿನಿಂದ ಇರಿದಿದ್ದಾನೆ. ತಡೆಯಲು ಬಂದ ಪಕ್ಕದ ಮನೆಯ ವಿಜಯಮ್ಮ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ತೀವ್ರ ರಕ್ತಸ್ರಾವದಿಂದ ಶೋಭಾ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಸುನೀಗಿದ್ದಾಳೆ. ಎಂಬಿಎ ಪದವಿಧರೆಯಾಗಿದ್ದ ಶೋಭಾಗೆ ಅಪ್ಪ-ಅಮ್ಮ ಇರಲಿಲ್ಲ. ಟ್ಯೂಶನ್ ಮಾಡಿ ಜೀವನ ಸಾಗಿಸುತ್ತಿದ್ದಳೆಂದು ತಿಳಿದುಬಂದಿದೆ.

2 ಮಕ್ಕಳ ತಂದೆಯಾಗಿದ್ದರೂ ಗಿರೀಶ್ ಶೋಭಾ ಮೇಲೆ ಮೋಹ ಬೆಳೆಸಿಕೊಂಡಿದ್ದ. ಅಪ್ಪ-ಅಮ್ಮ ಯಾರೂ ಇಲ್ಲ ಎಂಬುದನ್ನೇ ಅವಕಾಶವಾಗಿ ತೆಗೆದುಕೊಂಡಿದ್ದ ಗಿರೀಶ್ ಇನ್ನಿಲ್ಲದಂತೆ ಪೀಡಿಸಿದ್ದ. ಪಾಪ ಅನಾಥ ಯುವತಿಯನ್ನ ಇವತ್ತು ಚಾಕುವಿನಿಂದ ಇರಿದು ಕೊಂದೇ ಬಿಟ್ಟಿದ್ದಾನೆ. ತಲೆಮರೆಸಿಕೊಂಡಿರುವ ಕೊಲೆಗಡುಕ ಗಿರೀಶ್`ಗಾಗಿ ಬ್ಯಾಟರಾಯನಪುರ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆಯಿಂದ ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಬಗ್ಗೆ ಎಸ್ಐಟಿ ತನಿಖೆ ಶುರು

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎನ್.ರವಿಕುಮಾರ್

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದರ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ ಎಂದ ಸಿಟಿ ರವಿ

ಮುಂದಿನ ಸುದ್ದಿ
Show comments