Webdunia - Bharat's app for daily news and videos

Install App

ಕಾಲೇಜಿನಿಂದ ಬರುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಆರೆಸ್ಟ್

Webdunia
ಮಂಗಳವಾರ, 20 ಜೂನ್ 2017 (20:20 IST)
ಬೆಳ್ತಂಗಡಿಯಲ್ಲಿರುವ ಆಶ್ರಯಕಾಲೋನಿಯಲ್ಲಿರುವ ರಬ್ಬರ ತೋಟದ ಬಳಿ ಕಾಲೇಜಿನಿಂದ ಬರುತ್ತಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
 
ದ್ವಿಚಕ್ರವಾಹನದಲ್ಲಿ ಬಂದ ಇಬ್ರಾಹಿಂ ಎನ್ನುವ ಆರೋಪಿ, ವಿದ್ಯಾರ್ಥಿನಿಯೊಬ್ಬಳೇ ನಡೆದು ಬರುತ್ತಿರುವುದು ಕಂಡು ಆಕೆಯನ್ನು ಎಳೆದಾಡಿ ಅತ್ಯಾಚಾರಕ್ಕೆ ಯತ್ನಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಆರೋಪಿಯ ವರ್ತನೆಯಿಂದ ಗಾಬರಿಗೊಂಡ ವಿದ್ಯಾರ್ಥಿನಿ ಸಹಾಯಕ್ಕಾಗಿ ಜೋರಾಗಿ ಕೂಗಿ ಕೊಂಡಿದ್ದಾಳೆ.
 
ವಿದ್ಯಾರ್ಥಿನಿಯ ಕೂಗು ಕೇಳಿದ ಸಾರ್ವಜನಿಕರು ಸ್ಥಳಕ್ಕೆ ಬಂದಿದ್ದಾರೆ. ಸಾರ್ವಜನಿಕರು ಬರುತ್ತಿರುವುದು ಕಂಡ ಇಬ್ರಾಹಿಂ ಬೈಕ್ ತೆಗೆದುಕೊಂಡು ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ, ಅಟೋಗೆ ಡಿಕ್ಕಿ ಹೊಡೆದು ಕೇಳಗೆ ಬಿದ್ದಿದ್ದಾನೆ,
 
ಪರಾರಿಯಾಗಲು ಯತ್ನಿಸುತ್ತಿದ್ದ ಕಿಡಿಗೇಡಿ ಇಬ್ರಾಹಿಂನನ್ನು ಹಿಡಿದ ಸ್ಥಳೀಯರು ಮನಬಂದಂತೆ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
 
ಆರೋಪಿ ಇಬ್ರಾಹಿಂ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ. 
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/  

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ