Select Your Language

Notifications

webdunia
webdunia
webdunia
webdunia

ಮುಟ್ಟಿನ ಹೊಟ್ಟೆ ನೋವು ಸಹಿಸಲಾಗದೆ ಆತ್ಮಹತ್ಯೆ ಶರಣಾದ ಬಾಲಕಿ

ಮುಟ್ಟಿನ ಹೊಟ್ಟೆ ನೋವು ಸಹಿಸಲಾಗದೆ ಆತ್ಮಹತ್ಯೆ ಶರಣಾದ ಬಾಲಕಿ
ಬಾಗಲಕೋಟೆ , ಸೋಮವಾರ, 10 ಡಿಸೆಂಬರ್ 2018 (06:54 IST)
ಬಾಗಲಕೋಟೆ : ಸಾಮಾನ್ಯವಾಗಿ ಎಲ್ಲಾ ಹುಡುಗಿಯರಿಗೂ ಋತುಚಕ್ರದ ಸಮಯದಲ್ಲಿ ಹೊಟ್ಟೆ ನೋವು ಅನುಭವಿಸುತ್ತಾರೆ. ಆದರೆ 15 ವರ್ಷದ ಬಾಲಕಿಯೊಬ್ಬಳು ಈ ಹೊಟ್ಟೆನೋವನ್ನು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ಕೆರೂರ ಪಟ್ಟಣದಲ್ಲಿ ನಡೆದಿದೆ.



ವಿಜಯಲಕ್ಷ್ಮಿ ಎಂಬಾಕೆ ಆತ್ಮಹತ್ಯೆಗೆ ಶರಣಾದ ಬಾಲಕಿ. ಕೆರೂರು ಪಟ್ಟಣದಲ್ಲಿ ಅಜ್ಜಿಯೊಂದಿಗೆ ಮನೆಯಲ್ಲಿ ವಾಸವಾಗಿದ್ದ ಈಕೆ  ಖಾಸಗಿ ಪ್ರೌಢಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದಳು. ಈಕೆಗೆ ಪ್ರತಿತಿಂಗಳು ಋತು ಚಕ್ರದ ಸಮಯದಲ್ಲಿ ಹೊಟ್ಟೆ ನೋವು ಬರುತ್ತಿದ್ದು, ಈ ಹೊಟ್ಟೆನೋವನ್ನು ತಾಳಲಾರದೆ ಮನನೊಂದು ಅಜ್ಜಿ ಊರಿಗೆ  ತೆರಳಿದ್ದ ವೇಳೆಯಲ್ಲಿ ವೇಲ್​​ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.


ಈ ಪ್ರಕರಣ ಕೆರೂರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ವಿಜಯಲಕ್ಷ್ಮಿ ತಂದೆ ಅವರು ಋತು ಚಕ್ರದ ಸಮಯದಲ್ಲಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು ಹೀಗಾಗಿ ಮನನೊಂದು ನೇಣಿಗೆ ಶರಣಾಗಿದ್ದಾಳೆಂದು ದೂರಿನ ಪ್ರತಿಯಲ್ಲಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮದ್ಯ ಸೇವಿಸಲು ಹಣ ನೀಡದಿದ್ದಕ್ಕೆ ಹೆತ್ತ ತಾಯಿಗೆ ಬೆಂಕಿ ಹಚ್ಚಿದ ಮಗ