Webdunia - Bharat's app for daily news and videos

Install App

ಆಸ್ತಿಗಳಿಗೆ ಉತ್ತರಾಧಿಕಾರಿಯಾಗಲು ಹೆಣ್ಣು ಮಕ್ಕಳು ಅರ್ಹರು: ಸುಪ್ರೀಂ ಕೋರ್ಟ್

Webdunia
ಶುಕ್ರವಾರ, 21 ಜನವರಿ 2022 (21:33 IST)
ಮಹತ್ವದ ತೀರ್ಪು ನೀಡಿದ್ದು, ಹಿಂದು ವ್ಯಕ್ತಿಯ ಸ್ವಯಾರ್ಜಿತ ಮತ್ತು ಇತರ ಆಸ್ತಿಗಳಿಗೆ ಹೆಣ್ಣು ಮಕ್ಕಳು ಉತ್ತರಾಧಿಕಾರಿಯಾಗಲು ಅರ್ಹರಾಗಿರುತ್ತಾರೆ ಎಂದು ಆದೇಶ ನೀಡಿದೆ.
ಮದ್ರಾಸ್ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್ ಅಬ್ದುಲ್ ನಜೀರ್ ಮತ್ತು ಕೃಷ್ಣ ಮುರಾರಿ ವಿಭಾಗೀಯ ಪೀಠ, ಹಿಂದು ಉತ್ತರಾಧಿಕಾರ ಕಾಯ್ದೆಯಡಿಯಲ್ಲಿ ಹಿಂದು ಮಹಿಳೆಯರು ಮತ್ತು ವಿಧವೆಯರ ಆಸ್ತಿ ಹಕ್ಕುಗಳ ಅಡಿಯಲ್ಲಿ ಆದೇಶ ನೀಡಿದ್ದಾರೆ.
ಹಿಂದು ಮಹಿಳೆಯು ತನ್ನ ಪಾಲಿನ ಆಸ್ತಿಯನ್ನು ಉಯಿಲು (ವಿಲ್) ಮಾಡದೇ ಸತ್ತರೆ ಆಕೆ ತನ್ನ ತಂದೆ ಅಥವಾ ತಾಯಿಯಿಂದ ಪಡೆದುಕೊಂಡಿರುವ ಆಸ್ತಿಯು ಆಕೆಯ ತಂದೆಯ ವಾರಸುದಾರರಿಗೆ ಮರಳುತ್ತದೆ, ಒಂದು ವೇಳೆ ಆ ಆಸ್ತಿಯ ಗಂಡ ಅಥವಾ ಗಂಡನ ತಂದೆಯಿಂದ ಪಡೆದುಕೊಂಡಿದ್ದರೆ ಆ ಆಸ್ತಿಯು ಗಂಡನ ಉತ್ತರಾಧಿಕಾರಿಗಳಿಗೆ ಮರಳುತ್ತದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.(ಇಲ್ಲಿ ತಂದೆಯ ವಾರಸುದಾರರು ಎಂದರೆ ತಂದೆಯ ಪುತ್ರಿಯರು, ಪತ್ನಿ, ತಾಯಿ, ಮೃತ ಪುತ್ರನ ಪುತ್ರರು, ಮೃತ ಪುತ್ರನ ಪುತ್ರಿಯರು, ಮೃತ ಪುತ್ರಿಯ ಪುತ್ರಿಯರು. ಹಾಗೆಯೇ ಪತಿಯ ವಾರಸುದಾರರು ಎಂದರೆ ಅವರ ಪುತ್ರ, ಪುತ್ರಿ, ತಾಯಿ ಹಾಗೂ ಮೊಮ್ಮಕ್ಕಳು).
ವಿಲ್‌ ಬರೆಯದೆ ಸಾಯುವ ಹಿಂದು ವ್ಯಕ್ತಿಯ ಸ್ವಯಾರ್ಜಿತ ಹಾಗೂ ವಿಭಜನೆಯಿಂದ ಬಂದ ಆಸ್ತಿಗಳು ಹೆಣ್ಣುಮಕ್ಕಳಿಗೆ ಆನುವಂಶಿಕವಾಗಿ ಸಿಗಬೇಕಾಗುತ್ತದೆ ಮತ್ತು ಅವರು ಕುಟುಂಬದ ಇತರ ಸದಸ್ಯರಿಗಿಂತ ಹೆಚ್ಚಿನ ಆದ್ಯತೆ ಪಡೆಯಲಿದ್ದಾರೆ. ಇದರ ಅರ್ಥ, ಒಂದು ವೇಳೆ ಹಿಂದು ಪುರುಷ ವಿಲ್‌ ಬರೆದಿಡದೆ ಮೃತಪಟ್ಟರೆ, ಆತನ ಸ್ವಯಾರ್ಜಿತ ಆಸ್ತಿ, ಜಂಟಿ ಮಾಲೀಕತ್ವ ಅಥವಾ ಕೌಟುಂಬಿಕ ಆಸ್ತಿಯ ವಿಭಜನೆಯಿಂದ ಪಡೆದುಕೊಂಡ ಆಸ್ತಿಯನ್ನು ಹಾಗೆಯೇ ವಂಶಪಾರಂಪರ್ಯವಾಗಿ ಹಂಚಿಕೆ ಮಾಡಲಾಗುತ್ತದೆಯೇ ವಿನಾ, ಉಳಿಯುವಿಕೆಯ ಆಧಾರದಲ್ಲಿ ಅಲ್ಲ. ಅಂತಹ ಹಿಂದು ಪುರುಷರ ಹೆಣ್ಣುಮಕ್ಕಳು ಕುಟುಂಬದ ಇತರ ಸದಸ್ಯರಿಗಿಂತ (ಮೃತ ತಂದೆಯ ಸಹೋದರರ ಗಂಡುಮಕ್ಕಳು ಅಥವಾ ಹೆಣ್ಣುಮಕ್ಕಳು) ಆ ಆಸ್ತಿಯನ್ನು ಆನುವಂಶಿಕವಾಗಿ ಪಡೆದುಕೊಳ್ಳಲು ಅರ್ಹತೆ ಪಡೆದಿರುತ್ತಾರೆ ಎಂದು ಕೋರ್ಟ್‌ ಹೇಳಿದೆ.
ಹಿಂದು ಉತ್ತರಾಧಿಕಾರ ಕಾಯ್ದೆಯ ಮುಖ್ಯ ಉದ್ದೇಶವು, ಆಸ್ತಿ ಹಕ್ಕುಗಳಿಗೆ ಸಂಬಂಧಿಸಿದಂತೆ ಪುರುಷ ಮತ್ತು ಸ್ತ್ರೀಯರ ನಡುವೆ ಸಂಪೂರ್ಣ ಸಮಾನತೆಯನ್ನು ಸ್ಥಾಪಿಸುವುದು ಆಗಿದೆ ನ್ಯಾಯಮೂರ್ತಿಗಳು ಹೇಳಿದರು.
ಉಯಿಲು ಇಲ್ಲದೆ ಮರಣ ಹೊಂದಿದ ತಂದೆಯ ಮರಣದ ನಂತರ ಅಂತಹ ಆಸ್ತಿಯು ಉತ್ತರಾಧಿಕಾರವಾಗಿ ಮಗಳಿಗೆ ಅಥವಾ ತಂದೆಯ ಸಹೋದರನಿಗೆ ಹಂಚಿಕೆಯಾಗಿದೆ ಎಂಬ ಪ್ರಶ್ನೆಗೆ ಸ್ಪಷ್ಟನೆ ನೀಡಲಾಗಿದೆ.
ವಿಧವೆ ಅಥವಾ ಮಗಳು ಸ್ವಯಂ-ಸ್ವಾಧೀನಪಡಿಸಿಕೊಂಡ ಆಸ್ತಿ ಅಥವಾ ಹಿಂದುವ್ಯಕ್ತಿಯ ಪುತ್ರಿ ಆಸ್ತಿಯ ವಿಭಜನೆಯಲ್ಲಿ ಪಡೆದ ಪಾಲಿಗೆ ಉತ್ತರಾಧಿಕಾರ ಪಡೆಯುವ ಹಕ್ಕನ್ನು ಹಳೆಯ ಸಾಂಪ್ರದಾಯಿಕ ಹಿಂದು ಕಾನೂನಿನಲ್ಲಿ ಇದೆ. ವಿವಿಧ ನ್ಯಾಯಾಂಗ ತೀರ್ಪುಗಳಿಂದಲೂ ಇದನ್ನು ಗುರುತಿಸಲಾಗಿದೆ ಎಂದು ಹೇಳಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸಿದ್ದರಾಮಯ್ಯ ಔಟ್ ಗೋಯಿಂಗ್ ವ್ಯಕ್ತಿ: ಅವರ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದ ಅಶೋಕ್‌

Pradeep Eshwar: ಚಕ್ರವರ್ತಿ ಸೂಲಿಬೆಲೆ ಎಲ್ಲ ನನ್ನ ಲೆವೆಲ್ ನಲ್ಲಿಲ್ಲ, ನನ್ನ ಲೆವೆಲ್ಲೇ ಬೇರೆ: ಪ್ರದೀಪ್ ಈಶ್ವರ್

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

ಮುಂದಿನ ಸುದ್ದಿ
Show comments