Webdunia - Bharat's app for daily news and videos

Install App

ಬೆಂಗಳೂರು ನಗರದಲ್ಲಿ ಅಕ್ರಮ ಕ್ಯಾಸಿನೊ ಗಳಿಗೆ ವಿರಾಮ ನೀಡಿ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ

Webdunia
ಗುರುವಾರ, 30 ಸೆಪ್ಟಂಬರ್ 2021 (21:51 IST)
ನಗರದಲ್ಲಿ ನಡೆಯಿತ್ತಿರುವ ಅಕ್ರಮ ಕ್ಯಾಸಿನೋ ಗಳನ್ನು ಮಟ್ಟ ಹಾಕಬೇಕು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಪೊಲೀಸರಿಗೆ ಸೂಚನೆ ನೀಡಿದರು.
ಬೆಂಗಳೂರು ನಗರ ಪೊಲೀಸ್ ಆಯುಕ್ತರೊಂದಿಗೆ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ನಗರವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳಬೇಕು. ರೌಡಿ ಗಳನ್ನೂ ಮಟ್ಟ ಹಾಕಬೇಕು. ಸುಳ್ಳು ದಾಖಲೆ ಪತ್ರ ತಯಾರಿಸಿ, ಸರ್ಕಾರಿ ಹಾಗೂ ನಾಗರಿಕರ ಭೂಮಿ ಮತ್ತು ನಿವೇಶನಗಳನ್ನು ಕಬಳಿಸುವವರ ವಿರುದ್ಧ ನಿಷ್ಠುರವಾಗಿ ಕ್ರಮ ಜರುಗಿಸಬೇಕು ಎಂದರು.
ಸಮಾಜದ ಅಶಾಂತಿಗೆ ಕಾರಣವಾಗುವ ಎಲ್ಲ ಅಕ್ರಮ ಕ್ಲಬ್, ಕ್ಯಾಸಿನೋಗಳೂ ಹಾಗೂ ಇನ್ನಿತರ ಕಾನೂನುಬಾಹಿರವಾಗಿ ನಡೆಯುವ ಎಲ್ಲ ರೀತಿಯ ಅಕ್ರಮಗಳನ್ನು ತಡೆಯಬೇಕು.  ನಾಗರಿಕರ, ಅದರಲ್ಲಿಯೂ ಮಹಿಳೆಯರ ಹಾಗೂ ಮಕ್ಕಳ  ರಕ್ಷಣೆಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.
ನಾಗರಿಕರ ರಕ್ಷಣೆಗೆ ಹತ್ತು ಹಲವು ಕಾನೂನುಗಳಿದ್ದು ಅವುಗಳಿಗೆ ಮಾನ್ಯತೆ ಬರಬೇಕಾದರೆ, ಪೊಲೀಸರು 
ಕಟ್ಟು ನಿಟ್ಟಾಗಿ ಜಾರಿಗೆ ನೀಡಬೇಕು. ಹಾಗಾದರೆ ಮಾತ್ರ ಸಾರ್ವಜನಿಕರಿಗೆ ಪೊಲೀಸ್ ವ್ಯವಸ್ಥೆ ಬಗ್ಗೆ 
ವಿಶ್ವಾಸ ಮೂಡುತ್ತದೆ ಎಂದರು.
ಅಕ್ರಮ ಕ್ಲಬ್ ಮತ್ತು ಕ್ಯಾಸಿನೋಗಳು ನಗರದಲ್ಲಿ ನಡೆಯುತ್ತಿರುವ ಬಗ್ಗೆ, ವರದಿಗಳಿವೆ. ಅವುಗಳನ್ನು ನಿರ್ದಾಕ್ಷಿಣ್ಯವಾಗಿ ನಿಲ್ಲಿಸಬೇಕು. ಇದಕ್ಕಾಗಿ ವಿಶೇಷ ಕಾರ್ಯಪಡೆ ರಚಿಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಪೊಲೀಸರಿಗೆ ನಿರ್ದೇಶಿಸಿದ್ದೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮಲ್ಲಿಕಾರ್ಜುನ ಖರ್ಗೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ

ಎಸ್ ಎಂ ಕೃಷ್ಣರಿಂದಾಗಿ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ ಬೇಸರ

ಹೆಣ್ಮಕ್ಳು ಸೇಫ್ಟಿಗಾಗಿ ತಪ್ಪದೇ ಈ ಆಪ್ ಡೌನ್ ಲೋಡ್ ಮಾಡಿ

ಮುಂದಿನ ಸುದ್ದಿ
Show comments