Webdunia - Bharat's app for daily news and videos

Install App

ಮಾತೃಭಾಷೆಯಲ್ಲೇ ವಿದ್ಯಾಭ್ಯಾಸ: ವೆಂಕಯ್ಯ ನಾಯ್ಡು

Webdunia
ಸೋಮವಾರ, 12 ಡಿಸೆಂಬರ್ 2016 (11:45 IST)
ಮಾಧ್ಯಮಗಳು ಸತ್ಯ ಮತ್ತು ವಿಶ್ವಾಸಾರ್ಹ ಸಂಗತಿಗಳನ್ನು ಪ್ರಸಾರ ಮಾಡಲು ಒತ್ತು ನೀಡುವುದರೊಂದಿಗೆ ಆಯಾ ಭಾಗದ ಕಲೆ, ಸಾಹಿತ್ಯ, ಸಂಸ್ಕೃಂತಿ, ಪರಂಪರೆ ಹಾಗೂ ಮೌಲ್ಯಗಳನ್ನು ಕಾಪಾಡಬೇಕೆಂದು ಕೇಂದ್ರ ವಾರ್ತಾ ಮತ್ತು ಪ್ರಸಾರ, ನಗರಾಭಿವೃದ್ಧಿ, ವಸತಿ ಹಾಗೂ ಬಡತನ ನಿರ್ಮೂಲನಾ ಖಾತೆ ಸಚಿವ ಎಂ. ವೆಂಕಯ್ಯ ನಾಯ್ಡು ಹೇಳಿದರು. 
 
ಅವರು ರವಿವಾರ ಕಲಬುರಗಿಯಲ್ಲಿ ಗುಲಬರ್ಗಾ ಆಕಾಶವಾಣಿ ಕೇಂದ್ರದ ಸುವರ್ಣ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಭಾಷೆ, ಭಾವನೆ ಮತ್ತು ಸಂಸ್ಕøತಿ ಇವು ಪರಸ್ಪರ ಅವಿನಾಭಾವ ಸಂಬಂಧ ಹೊಂದಿದ್ದು, ಇವುಗಳನ್ನು ಉಳಿಸಿ ಬೆಳೆಸುವ ಕಾರ್ಯ ಮಾಧ್ಯಮಗಳಿಂದ ಆಗಬೇಕಾಗಿದೆ. ಅಂತರಾಳದಿಂದ ಬರುವ ಮಾತೃಭಾಷೆಯಲ್ಲಿಯೇ ಮಕ್ಕಳಿಗೆ ವಿದ್ಯಾಭ್ಯಾಸ ಕಲಿಸಬೇಕಲ್ಲದೇ ಮಾತೃಭಾಷೆಯನ್ನು ಸದಾ ಪ್ರೀತಿಸಬೇಕು ಎಂದರು. 
 
ಈ ಭಾಗದಲ್ಲಿ ಶರಣರ, ಸೂಫಿ ಸಂತರ, ಸಿಖ್, ಬುದ್ಧ, ಜೈನ್ ಸಂಸ್ಕೃಂತಿಯು ಬೆಳೆದು ಬಂದಿದೆ. ವಿವಿಧ ಸಾಮ್ರಾಜ್ಯಗಳ ಆಳ್ವಿಕೆಗೆ ಒಳಪಟ್ಟ ಈ ಭಾಗ ವಿವಿಧ ಭಾಷಾ ಸಂಸ್ಕøತಿ, ಅತ್ಯಂತ ಶ್ರೀಮಂತ ನೈಸರ್ಗಿಕ ಸಂಪನ್ಮೂಲ ಹಾಗೂ ಅನೇಕ ಐತಿಹಾಸಿಕ ತಾಣಗಳನ್ನು ಹೊಂದಿದೆ. ಕಲಬುರಗಿ ಆಕಾಶವಾಣಿ ಕೇಂದ್ರವು ಕಳೆದ 50 ವರ್ಷಗಳ ಅವಧಿಯಲ್ಲಿ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯನ್ನು ಹೆಚ್ಚಿಸುವ ಹಾಗೂ ಜನರ ವಿಶ್ವಾಸಾರ್ಹತೆ ಪಡೆಯುವ ಕಾರ್ಯಕ್ರಮಗಳನ್ನು ಪ್ರಸಾರ ಮಾಡಿರುವುದು ಶ್ಲಾಘನೀಯವಾಗಿದೆ ಎಂದರು. 
 
ಕಲಬುರಗಿ ನಗರವನ್ನು ಸ್ಮಾರ್ಟ್ ಸಿಟಿಯನ್ನಾಗಿ ಘೋಷಣೆ ಮಾಡುವ ಸಂಬಂಧ ಇರುವ ಮಾನದಂಡಗಳನ್ನು ಪೂರೈಸುವ ಮೂಲಕ ಅರ್ಹತೆ ಪಡೆಯುವುದು ಅವಶ್ಯಕವಾಗಿದೆ. ಆದರೂ ಈ ಕುರಿತು ಸಕಾರಾತ್ಮಕವಾಗಿ ಪ್ರಯತ್ನಿಸುವುದಾಗಿ ಹೇಳಿದರಲ್ಲದೇ ಈ ಭಾಗದಲ್ಲಿ ಜಾರಿಗೊಂಡ 371(ಜೆ) ಅನ್ವಯ ಅಭಿವೃದ್ಧಿ ಕಾರ್ಯಗಳಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜೊತೆಯಾಗಿ ಕೆಲಸ ಕಾರ್ಯಗಳನ್ನು ಕೈಗೊಳ್ಳಬೇಕಾಗಿದೆ ಎಂದರು. 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments