Webdunia - Bharat's app for daily news and videos

Install App

ನನಗೆ ಮಾಟ ಮಾಡಿಸಿದವರಿಗೆ ಶಿಕ್ಷೆ ನೀಡಿದರೆ 50 ಸಾವಿರ ಕಾಣಿಕೆ: ಸವದತ್ತಿ ಯಲ್ಲಮ್ಮನಿಗೆ ಭಕ್ತನ ಪತ್ರ!

Webdunia
ಶುಕ್ರವಾರ, 24 ಜೂನ್ 2022 (14:31 IST)
ನನಗೆ ಮಾಟ ಮಂತ್ರ ಮಾಡಿಸಿದವರಿಗೆ ಶಿಕ್ಷೆ ನೀಡಿದರೆ 50,001 ರೂ. ಕಾಣಿಕೆ ನೀಡುವುದಾಗಿ  ಭಕ್ತನೊಬ್ಬ ಬೆಳಗಾವಿಯ ಸವದತ್ತಿ ಯಲ್ಲಮ್ಮದೇವಿ ದೇವಸ್ಥಾನದ ಹುಂಡಿಗೆ ಪತ್ರ ಬರೆದು ಹುಂಡಿಗೆ ಹಾಕಿದ್ದಾನೆ.
ಸವದತ್ತಿ ಯಲ್ಲಮ್ಮದೇವಿ ದೇವಸ್ಥಾನದಲ್ಲಿ ಹುಂಡಿ ಎಣಿಕೆ ಕಾರ್ಯ ಶುಕ್ರವಾರ ನಡೆದಿದ್ದು, ಭಕ್ತರು ಹಣದ ಜೊತೆ ಚಿತ್ರ ವಿಚಿತ್ರ ಬೇಡಿಕೆಗಳನ್ನು ಮಂಡಿಸಿ ಬರೆದ ಪತ್ರಗಳು ಪತ್ತೆಯಾಗಿವೆ.
ಪತ್ರವನ್ನು ಹುಂಡಿಗೆ ಹಾಕಿದ್ರೆ ದೇವಿ ಕೋರಿಕೆ ಈಡೇರಿಸುತ್ತಾಳೆಂಬ ನಂಬಿಕೆ ಜನರಿಗಿದೆ. ಈ ಹಿನ್ನೆಲೆಯಲ್ಲಿ ಜನರು ತಮ್ಮ ಬೇಡಿಕೆಯನ್ನು ಪತ್ರದ ಮೂಲಕ ದೇವಿ ಮುಂದಿಟ್ಟಿದ್ದಾರೆ. ಭಕ್ತರ ಈ ವಿಚಿತ್ರ ಕೋರಿಕೆ ಪತ್ರಗಳನ್ನ ಕಂಡು ಹುಂಡಿ ಎಣಿಕೆ ಸಿಬ್ಬಂದಿ ಶಾಕ್ ಆಗಿದ್ದಾರೆ. 
ಏಳು ಕೊಳ್ಳದ ಯಲ್ಲಮ್ಮದೇವಿಗೆ ಹಣದ ಅಮಿಷವೂಡ್ಡಿದ್ದ ಭಕ್ತನೊಬ್ಬ ನನಗೆ ಮಾಟ ಮಂತ್ರ ಮಾಡಿಸಿದವರಿಗೆ ಶಿಕ್ಷೆ ನೀಡಿದರೆ 50,001 ರೂ. ಕಾಣಿಕೆ ನೀಡುವುದಾಗಿ ಪತ್ರ ಬರೆದು ಹುಂಡಿಗೆ ಹಾಕಿದ್ದಾನೆ. ನನ್ನ ವ್ಯವಹಾರಕ್ಕೆ ಮಾಟ ಮಂತ್ರ ಮಾಡಿಸಿದ್ದಾರೆ. ಇದರಿಂದ ಸಾಲಗಾರರ ಕಾಟ ಶುರುವಾಗಿದೆ ಎಂದಿದ್ದಾನೆ. ಆನ್ ಲೈನ್ ಗೇಮ್ ನಲ್ಲಿ ಕಳೆದುಕೊಂಡ ಹಣ ಮರಳಿ ಬರುವಂತೆ ಮಾಡು ತಾಯಿ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಆನ್ ಲೈನ್ ಗೇಮ್ ಆಡಲು ಮನಸ್ಸು ಬರದಂತೆ ಮಾಡು ಎಂದು ಮನವಿ ಮಾಡಿಕೊಳ್ಳಲಾಗಿದೆ. ಮರಾಠಿ ಭಾಷೆಯಲ್ಲೂ ಭಕ್ತರು ದೇವಿ ಹುಂಡಿಗೆ ಪತ್ರ ಹಾಕಿ ಬೇಡಿಕೆ ಇಟ್ಟಿದ್ದಾರೆ.
40 ದಿನಗಳ ಕಾಲ ಸಂಗ್ರಹವಿದ್ದ ಹುಂಡಿ ಕಾರ್ಯ ದೇವಸ್ಥಾನ ಆವರಣದಲ್ಲಿ ಎರಡು ದಿನ ನಡೆದಿತ್ತು. ಹುಂಡಿಯಲ್ಲಿ 40 ದಿನದಲ್ಲಿ 1.13ಕೋಟಿ ರೂ. ನಗದು ಸಂಗ್ರಹವಾಗಿದೆ. 22ಲಕ್ಷ ರೂ. ಮೌಲ್ಯದ ಬಂಗಾರ, 3.86ಲಕ್ಷ ರೂ ಮೌಲ್ಯದ ಬೆಳ್ಳಿ ಪತ್ತೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments