Select Your Language

Notifications

webdunia
webdunia
webdunia
webdunia

ಹಿಜಬ್ಗೆ ಅವಕಾಶ ನೀಡಿ ಎಂದ ವಿದ್ಯಾರ್ಥಿಗಳು!

ಹಿಜಬ್ಗೆ ಅವಕಾಶ ನೀಡಿ ಎಂದ ವಿದ್ಯಾರ್ಥಿಗಳು!
ಶಿವಮೊಗ್ಗ , ಶನಿವಾರ, 19 ಫೆಬ್ರವರಿ 2022 (12:14 IST)
ಶಿವಮೊಗ್ಗ : ಹಿಜಬ್ಗೆ ಅವಕಾಶ ನೀಡುವಂತೆ ಕರ್ನಾಟಕ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳಿಂದ ನಿರಂತರ ಪ್ರತಿಭಟನೆ ನಡೆಸುತ್ತಿದ್ದ 58 ವಿದ್ಯಾರ್ಥಿಗಳನ್ನು ಅಮಾನತು ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪದಲ್ಲಿ ನಡೆದಿದೆ.

ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಹಿಜಬ್ಗೆ ಅವಕಾಶ ನೀಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸುತ್ತಿದ್ದರು.

ಈ ಹಿನ್ನೆಲೆಯಲ್ಲಿ ಶಿಕ್ಷಕರು ಪ್ರತಿಭಟನೆ ನಡೆಸದೇ ತರಗತಿಗೆ ಹಾಜರಾಗುವಂತೆ ಮನವಿ ಮಾಡಿದ್ದರು. ಆದರೆ ಶಿಕ್ಷಕರ ಮಾತು ಧಿಕ್ಕರಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.

 

Share this Story:

Follow Webdunia kannada

ಮುಂದಿನ ಸುದ್ದಿ

ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ?