Select Your Language

Notifications

webdunia
webdunia
webdunia
webdunia

ಸಿಎಂ, ಡಿಸಿಎಂ ಒಗ್ಗಟ್ಟು ನೋಡಿ ಖುಷಿಯಾಯಿತು: ಸಂತೋಷ್ ಲಾಡ್

Minister Santhosh Lad
ಬೀದರ್: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ಭಿನ್ನಾಭಿಪ್ರಾಯವನ್ನು ಬದಿಗಿಟ್ಟು ಒಟ್ಟಾಗಿ ಮಾತನಾಡಿರುವುದು ಖುಷಿಯ ವಿಚಾರ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. 

ಸಿಎಂ ಹಾಗೂ ಡಿಸಿಎಂ ಬ್ರೇಕ್‌ಫಾಸ್ಟ್‌ ಮಾತುಕತೆ ವಿಚಾರವಾಗಿ ಅವರು ಪ್ರತಿಕ್ರಿಯಿಸಿ,  ಸಿಎಂ ಮತ್ತು ಡಿಸಿಎಂ ಒಗ್ಗೂಡಿರುವುದು ನನಗೆ ತುಂಬಾ ಖುಷಿ ತಂದಿದೆ. ಬಳಿಕ ಅವರು ಮಾಧ್ಯಮದವರಿಗೆ ಏನು ಬೇಕೋ ಅದೆಲ್ಲವನ್ನೂ ಸ್ಪಷ್ಟಪಡಿಸಿದ್ದಾರೆ.ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ ಹೈಕಮಾಂಡ್ ದೆಹಲಿಗೆ ಕರೆದರೂ ಇಬ್ಬರೂ ತೆರಳಿ ಹೈಕಮಾಂಡ್ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಶಿವಕುಮಾರ್ ಬೀದರ್‌ನಲ್ಲಿ ಹೇಳಿಕೆ ನೀಡಿದ್ದಾರೆ ಎಂದರು. 

 "ಅಗತ್ಯವಿದ್ದರೆ ರಾಜ್ಯ ನಾಯಕರು ದೆಹಲಿಗೆ ಭೇಟಿ ನೀಡಬಹುದು" ಎಂದು ಭಾನುವಾರ ಸುಳಿವು ನೀಡಿದ್ದಾರೆ. 

ರಾಜ್ಯ ರಾಜಕಾರಣದಲ್ಲಿ ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದೆ. ಇಬ್ಬರು ಸಾಮಾಜಿಕ ಜಾಲತಾಣದಲ್ಲಿ ಕೌಂಟರ್ ನೀಡಿದ ಬೆನ್ನಲ್ಲೇ, ಬ್ರೇಕ್‌ಫಾಸ್ಟ್ ನೆಪದಲ್ಲಿ ಮುಖಾಮುಖಿಯಾಗಿ ಮಾತುಕತೆ ನಡೆಸಿದ್ದಾರೆ. 

ಇಬ್ಬರು ನಾಯಕರು ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ. 




Share this Story:

Follow Webdunia kannada

ಮುಂದಿನ ಸುದ್ದಿ

ಸ್ವಾಮೀಜಿಗಳು ಇಲ್ಲದಿದ್ದರೆ ದೇವೇಗೌಡರು ಸಿಎಂ ಆಗ್ತೀದ್ರಾ: ಕುಮಾರಸ್ವಾಮಿಗೆ ಶಿವಕುಮಾರ್ ಪ್ರಶ್ನೆ