Webdunia - Bharat's app for daily news and videos

Install App

ಮಹಾದಾಯಿ ಮಾತುಕತೆಗೆ ಸಿಎಂ ಗೋವಾಕ್ಕೆ ಹೋಗಲಿ– ಸುರೇಶ ಅಂಗಡಿ

Webdunia
ಶನಿವಾರ, 23 ಡಿಸೆಂಬರ್ 2017 (16:06 IST)
ಮಹಾದಾಯಿ ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಡಿಯೂರಪ್ಪ ಅವರ ನೇತೃತ್ವದಲ್ಲಿ ಗೋವಾಕ್ಕೆ ಹೋಗಿ ಮಾತುಕತೆ ನಡೆಸಬೇಕು ಎಂದು ಸಂಸದ ಸುರೇಶ ಅಂಗಡಿ ಒತ್ತಾಯಿಸಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಷ್ಟು ವರ್ಷಗಳ ನಂತರ ಯಡಿಯೂರಪ್ಪ ಅವರ ಪ್ರಯತ್ನದಿಂದ ಗೋವಾ ಸಕಾರಾತ್ಮಕವಾಗಿ ಸ್ಪಂದಿಸಿದೆ. ಆದ್ದರಿಂದ ಸಚಿವ ಎಂ.ಬಿ.ಪಾಟೀಲ್ ಅವರು ಯಡಿಯೂರಪ್ಪ ಅವರ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಿ ಎಂದು ಹೇಳಿದ್ದಾರೆ.
 
ರಾಜ್ಯಕ್ಕೆ ಮಹದಾಯಿ ನೀರು ಬಿಡಲು ಗೋವಾ ಸರಕಾರವನ್ನು ಯಡಿಯೂರಪ್ಪ ಒಪ್ಪಿಸಿದರೂ ರಾಜ್ಯ ಕಾಂಗ್ರೆಸ್ ಕೃತಜ್ಞತೆ ತಿಳಿಸಿಲ್ಲ. ಬದಲಾಗಿ ಆರೋಪ ಮಾಡುತ್ತಿದೆ. ಸೋನಿಯಾಗಾಂಧಿ ಅವರು ಈ ಹಿಂದೆ ಕರ್ನಾಟಕಕ್ಕೆ ಮಹದಾಯಿಯ ಒಂದು ಹನಿ ನೀರು ಕೊಡಬೇಡಿ ಎಂದಿದ್ದರು. ಆದ್ದರಿಂದ ಗೋವಾ ಕಾಂಗ್ರೆಸ್ ನೀರು ಬಿಡಲು ಆಕ್ಷೇಪ ಮಾಡುತ್ತಿದೆ ಎಂದು ದೂರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments