Select Your Language

Notifications

webdunia
webdunia
webdunia
webdunia

ಮಂಗಳೂರಿಗೆ ತೆರಳಿ ಕಾನೂನು ಸುವ್ಯವಸ್ಥೆ ಬಗ್ಗೆ ಸಭೆ ನಡೆಸುತ್ತೇನೆ-ಸಿಎಂ

ಮಂಗಳೂರಿಗೆ ತೆರಳಿ ಕಾನೂನು ಸುವ್ಯವಸ್ಥೆ ಬಗ್ಗೆ ಸಭೆ ನಡೆಸುತ್ತೇನೆ-ಸಿಎಂ
ಬೆಂಗಳೂರು , ಶನಿವಾರ, 21 ಡಿಸೆಂಬರ್ 2019 (11:29 IST)
ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ತೀವ್ರ ಪ್ರತಿಭಟನೆ ನಡೆದ ಹಿನ್ನಲೆಯಲ್ಲಿ ಅಲ್ಲಿನ ಪರಿಸ್ಥಿತಿಯನ್ನು ಗಮನಿಸಲು ಸಿಎಂ ಯಡಿಯೂರಪ್ಪ ಇಂದು ಮಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.



ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡದ ಸಿಎಂ, ಮಂಗಳೂರಿಗೆ ತೆರಳಿ ಕಾನೂನು ಸುವ್ಯವಸ್ಥೆ ಬಗ್ಗೆ ಸಭೆ ನಡೆಸುತ್ತೇನೆ.  ಹಿಂಸಾಚಾರ ಪ್ರಕರಣವನ್ನು ತನಿಖೆಗೆ ಕೊಡುವ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.


ಹಾಗೇ ಮಂಗಳೂರಿಗೆ ತೆರಳಲು ಮುಂದಾದ ಸಿದ್ದರಾಮಯ್ಯರಿಗೆ ನಿರ್ಬಂಧ ಹೇರಿದ ವಿಚಾರದ ಬಗ್ಗೆ ಮಾತನಾಡಿದ ಅವರು, ಸಿದ್ದರಾಮಯ್ಯರಿಗೆ ನಿರ್ಬಂಧ ಹೇರಬೇಕೆಂಬ ಉದ್ದೇಶವಿಲ್ಲ. ಅವರು ಮಂಗಳೂರಿಗೆ ಹೋಗಬಾರದೆಂಬ ಅಭಿಪ್ರಾಯವಿಲ್ಲ  ಕಾಂಗ್ರೆಸ್ ನವರ ಅವಧಿಯಲ್ಲಿ ಏನೇನಾಗಿದೆ ಎಂದು ಗೊತ್ತಿದೆ ಎಂದು ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಪ್ರತಿಭಟನೆಯಿಂದ ಶಾಂತವಾಗಿದ್ದ ಮಂಗಳೂರಿನಲ್ಲಿ ಇಂದು ಪೊಲೀಸರಿಂದ ಲಾಠಿ ಚಾರ್ಜ್