Webdunia - Bharat's app for daily news and videos

Install App

ಒಬ್ಬನನ್ನು ರಕ್ಷಿಸಲು ಹೋಗಿ 6 ಯುವಕರು ನೀರುಪಾಲು

Webdunia
ಭಾನುವಾರ, 20 ಮಾರ್ಚ್ 2022 (19:00 IST)
ಸ್ನಾನ ಮಾಡಲೆಂದು ನದಿಗೆ ಇಳಿದಿದ್ದ 6 ಯುವಕರು ನೀರುಪಾಲಾಗಿರುವ ಘಟನೆ ಓಡಿಶಾದ ಜೈಪುರದಲ್ಲಿ ನಡೆದಿದ್ದು, ಅವರಲ್ಲಿ ಮೂರು ಯುವಕರ ಮೃತದೇಹವನ್ನು ಪತ್ತೆಹಚ್ಚಲಾಗಿದೆ. ಉಳಿದ ಮೂವರು ಯುವಕರ ಮೃತದೇಹ ಪತ್ತೆಹಚ್ಚಲು ಶೋಧಕಾರ್ಯ ನಡೆಸಲಾಗುತ್ತಿದೆ.
 
ಓಡಿಶಾದ ಜೈಪುರದಲ್ಲಿ ಹೋಳಿಹಬ್ಬ ಆಚರಿಸಲಾಯಿತು. ಸಂಭ್ರಮಾಚರಣೆಯ ಬಳಿಕ ಇಲ್ಲಿನ ಖರಾಸೋತ್ರ ಸರೋವರಕ್ಕೆ ಸ್ಥಾನ ಮಾಡಲು ತೆರಳಿದ್ದ ವೇಳೆ ಅನಾಹುತ ಆಗಿದೆ.ಈ ಸಂಬಂಧ ಮಾಹಿತಿ ನೀಡಿರುವ ಜಿಲ್ಲಾ ಸಹಾಯಕ ಅಗ್ನಿಶಾಮಕ ಅಧಿಕಾರಿ ಪೂರ್ಣ ಚಂದ್ರ ಮರಾಂಡಿ, ನಾವು ಆಗಮಿಸುವ ಮೊದಲೇ ಸ್ಥಳೀಯರು ಒಬ್ಬ ಯುವಕನ ಮೃತದೇಹ ಹೊರತೆಗೆದಿದ್ದರು. ಬಳಿಕ ನಮ್ಮ ತಂಡವು ಕಾರ್ಯಾಚರಣೆ ನಡೆಸಿ, ಮತ್ತಿಬ್ಬರ ಮೃತದೇಹ ಪತ್ತೆಹಚ್ಚಲಾಯಿತು. ಆದರೆ, ಶನಿವಾರ ತಡರಾತ್ರಿ ವಿದ್ಯುತ್ ಬೆಳಕು ಕಡಿಮೆಯಿದ್ದ ಕಾರಣ ಇನ್ನೂ ಮೂವರ ಮೃತದೇಹವನ್ನು ಪತ್ತೆಹಚ್ಚಲು ಶೋಧಕಾರ್ಯ ನಡೆಸಲಾಗುತ್ತಿದೆ. ಶನಿವಾರ ರಾತ್ರಿ ಕಡಿಮೆ ಬೆಳಕಿನಿಂದ ಶೋಧ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಅಗ್ನಿಶಾಮಕ ಇಲಾಖೆ ಮತ್ತು ಒಡಿಶಾ ವಿಪತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ ಭಾನುವಾರ ಬೆಳಿಗ್ಗೆ ಮತ್ತೆ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದೆ ಎಂದು ಮಾಹಿತಿ ನೀಡಿದ್ದಾರೆ.ಇಷ್ಟಕ್ಕೂ ನಡೆದಿದ್ದೇನು?
ಮೃತನ ತಂದೆ ಸತ್ಯ ಚಂದ್ರ ಜೆನಾ ಮಾಹಿತಿ ನೀಡಿರುವ ಪ್ರಕಾರ, `ಶನಿವಾರ ಹೋಳಿ ಆಡಿದ ನಂತರ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದರು. ಅವರಲ್ಲಿ ಒಬ್ಬ ಸ್ನೇಹಿತ ಮುಳುಗುತ್ತಿರುವುದನ್ನು ಗಮನಿಸಿ, ಉಳಿದವರೂ ಒಬ್ಬೊಬ್ಬರಾಗಿ ರಕ್ಷಿಸುವ ಪ್ರಯತ್ನದಲ್ಲಿ ಮುಳುಗಿದರು. ಕೊನೆಯದಾಗಿ ರಕ್ಷಿಸಲು ಹೋದ ನನ್ನ ಮಗನೂ ನದಿಯಲ್ಲಿ ಮುಳುಗಿದನು ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments