Publish Date: Wed, 25 Jul 2018 (14:27 IST)
Updated Date: Wed, 25 Jul 2018 (14:32 IST)
ಅನ್ನದಾತ ದೇಶದ ಬೆನ್ನೆಲೆಬು ಎನ್ನಲಾಗುತ್ತದೆ. ಆದರೆ ತನ್ನದಲ್ಲದ ತಪ್ಪಿಗೆ ಒಂದಿಲ್ಲೊಂದು ಕಾರಣಕ್ಕೆ ಆರ್ಥಿಕ ಅಧೋಗತಿಗೆ ರೈತರು ಒಳಗಾಗುತ್ತಿದ್ದಾರೆ. ಆ ಪ್ರದೇಶದಲ್ಲಿ ಒಡೆದ ಕಾಲುವೆಗೆ ನೂರಾರು ಎಕರೆ ಪ್ರದೇಶದಲ್ಲಿ ಬೆಳೆಯಲಾಗಿದ್ದ ಬೆಳೆ ಕೊಚ್ಚಿಕೊಂಡು ಹೋಗಿದೆ.
ಕಾಲುವೆ ಒಡೆದು ಜಮೀನಿಗೆ ನುಗ್ಗಿದ ಅಪಾರ ಪ್ರಮಾಣದ ನೀರು ನುಗ್ಗಿರುವ ಘಟನೆ ನಡೆದಿದೆ.
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಲೂಟಗೆರಿ ಗ್ರಾಮದ ಬಳಿ ಘಟನೆ ನಡೆದಿದೆ. ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆ ಒಡೆದು ಅವಘಡ ಸಂಭವಿಸಿದೆ. ಕಾಲುವೆ ಒಡೆದು ರೈತರ ಜಮೀನಿಗೆ ನುಗ್ಗಿದ ಅಪಾರ ಪ್ರಮಾಣದ ನೀರಿನಿಂದಾಗಿ ಜಮೀನಿನಲ್ಲಿ ಬೆಳೆಯಲಾಗಿದ್ದ ತೊಗರಿ, ಹೆಸರು, ಈರುಳ್ಳಿ ಬೆಳೆಗಳು ನಾಶವಾಗಿದೆ.
ನೂರಾರು ರೈತರ ಬೆಳೆಗಳು ಹಾನಿಗೊಳಗಾಗಿದ್ದು, ರೈತರು ಕಂಗಾಲಾಗಿದ್ದಾರೆ. ಲಕ್ಷಾಂತರ ಮೌಲ್ಯದ ಬೆಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಮುಂದೇನು ಎಂಬ ಚಿಂತೆಯಲ್ಲಿ ಅಲ್ಲಿನ ರೈತರಿದ್ದಾರೆ.