Webdunia - Bharat's app for daily news and videos

Install App

ಗೋವಾದ ಬೈನಾ ಬೀಚ್`ನಲ್ಲಿ ಕನ್ನಡಿಗರ 55 ಮನೆಗಳು ತೆರವು

Webdunia
ಮಂಗಳವಾರ, 26 ಸೆಪ್ಟಂಬರ್ 2017 (13:44 IST)
ಗೋವಾ ಕನ್ನಡಿಗರ ಮೇಲೆ ಅಲ್ಲಿನ ಸರ್ಕಾರ ಮತ್ತೆ ದೌರ್ಜನ್ಯ ಎಸಗಿದೆ. ಬೈನಾ ಬೀಚ್`ನಲ್ಲಿ ನೆಲೆಸಿದ್ದ ಕನ್ನಡಿಗರ ವಕ್ಕಲೆಬ್ಬಿಸಲಾಗಿದೆ. ಬೆಳ್ಳಂ ಬೆಳಗ್ಗೆ ಜೆಸಿಬಿ, ಟಿಪ್ಪರ್`ಗಳಿಂದ ಮನೆಗಳನ್ನ ಧರೆಗುರುಳಿಸಲಾಗಿದೆ. 

ಕನ್ನಡಿಗರಿಗೆ ಸೇರಿದ ಸುಮಾರು 55 ಮನೆ ಮತ್ತು ದೇಗುಲಗಳನ್ನ ತೆರವು ಮಾಡಲಾಗಿದೆ. ದಕ್ಷಿಣ ಗೋವಾದ ಡಿಸಿ ನೇತೃತ್ವದಲ್ಲಿ 500ಕ್ಕೂ ಹೆಚ್ಚು ಪೊಲೀಸರನ್ನ ನಿಯೋಜಿಸಿಕೊಂಡು ಈ ಕಾರ್ಯಾಚರಣೆ ನಡೆಸಲಾಗಿದೆ. ಗೋವಾ ಸರ್ಕಾರದ ವಿರುದ್ಧ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆ 155 ಮನೆಗಳನ್ನ ತೆರವು ಮಾಡಲಾಗಿದ್ದು, ಇದೀಗ, ಉಳಿದ 55 ಕನ್ನಡಿಗರ ಮನೆಗಳನ್ನೂ ಕೆಡವಲಾಗಿದೆ. ಕನ್ನಡಿಗರು ಎಷ್ಟೆ ಗೋಗರೆದರೂ ಗೋವಾ ಸರ್ಕಾರ ಕೃಪೆ ತೋರಿಲ್ಲ. ಪುರಾತನ ದೇಗುಲವನ್ನೂ ಕೆಡವಲಾಗಿದೆ.

ಬೈನಾ ಬೀಚ್`ನಲ್ಲಿ ನೆಲೆಸಿದ್ದ ಕನ್ನಡಿಗರು ಆಧಾರ್, ರೇಶನ್ ಕಾರ್ಡ್ ಸಹ ಪಡೆದಿದ್ದರು. ಅಷ್ಟು ಮಾತ್ರವಲ್ಲದೆ ಪ್ರತೀ ವರ್ಷ ಸರ್ಕಾರಕ್ಕೆ ತೆರಿಗೆ ಕೂಡ ಪಾವತಿಸುತ್ತಿದ್ದರು. ಆದರೂ ಗೋವಾ ಸರ್ಕಾರ ಅವರ ಮನೆಗಳನ್ನ ಕೆಡವಿ ದೌರ್ಜನ್ಯ ಎಸಗಿದೆ ಎಂದು ಆರೋಪಿಸಲಾಗಿದೆ. ಕನ್ನಡಿಗರು ಅಕ್ರಮವಾಗಿ ನೆಲೆಸಿದ್ದಾರೆಂಬುದು ಗೋವಾ ಸರ್ಕಾರದ ನಿರ್ಧಾರವಾಗಿದ್ದು, ಕನ್ನಡಿಗರೆಂಬ ಕಾರಣಕ್ಕೆ ಕೊಂಚವೂ ಸಹಾನುಭೂತಿ ತೋರದೇ ತೆರವು ಮಾಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಮುಂದಿನ ಸುದ್ದಿ
Show comments