Webdunia - Bharat's app for daily news and videos

Install App

ಮಹಾನಗರ ಪಾಲಿಕೆಯಲ್ಲಿ ಗೋಲ್ ಮಾಲ್

Webdunia
ಸೋಮವಾರ, 15 ಜೂನ್ 2020 (21:13 IST)
ಮಹಾನಗರ ಪಾಲಿಕೆಯಲ್ಲಿ ನಡೆಯುತ್ತಿರುವ ಗೋಲ್ ಮಾಲ್ ವಿರುದ್ಧ ಸಚಿವರು ತನಿಖೆಗೆ ಆದೇಶಿಸಿದ್ದಾರೆ.
 

ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಕೆಲ ವಾರ್ಡ್‍ಗಳಿಗೆ ಅಗತ್ಯವಿರುವಷ್ಟು ಪೌರಕಾರ್ಮಿಕರ ನಿಯೋಜಿಸದೆ ಅವ್ಯವಹಾರ ನಡೆಸಲಾಗಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ತನಿಖೆ ನಡೆಸುವಂತೆ   ಜಿಲ್ಲಾಧಿಕಾರಿಗಳಿಗೆ ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ್ ಸೂಚಿಸಿದ್ದಾರೆ.

ಕುಲಂಕುಶ ವಿಚಾರಣೆ ಮಾಡಿ ಮುಂದಿನ ತಿಂಗಳು ವರದಿ ನೀಡಬೇಕೆಂದು ಹೇಳಿದ್ದಾರೆ.

ಇದಕ್ಕೂ ಮುನ್ನ, ಮಹಾನಗರ ಪಾಲಿಕೆಯ ಪರಿಸರ ಇಂಜಿನೀಯರ್ ಮುನಾಫ್ ಪಟೇಲ್ ಮಾತನಾಡಿ, ಕಲಬುರಗಿ ಮಹಾನಗರದಲ್ಲಿ 55 ವಾರ್ಡ್‍ಗಳಲ್ಲಿ ಮನೆ-ಮನೆ ಕಸ ಸಂಗ್ರಹಣೆಗೆ 351 ಮಂದಿ, ಕಸಗೂಡಿಸುವಿಕೆಗೆ 651, ಸಾಗಾಣಿಕೆ 166 ಮಂದಿ ಸೇರಿ ಒಟ್ಟು 1168 ಪೌರಕಾರ್ಮಿಕರಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು ಅವರು, ನಾನು ವಾಸವಿರುವ 35ನೇ ವಾರ್ಡಿನಲ್ಲಿ ಕೇವಲ ಮೂರೇ ಮಂದಿ ಪೌರಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ. ಪೌರ ಕಾರ್ಮಿಕರ ನಿಯೋಜನೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಅವರು ಆರೋಪಿಸಿದರು.

ಶಾಸಕ ಬಸವರಾಜ ಮುತ್ತಿಮೂಡ್ ಮಾತನಾಡಿ, ನಮ್ಮ ವಾರ್ಡ್‍ನಲ್ಲಿಯೂ ಇದೇ ಸ್ಥಿತಿ ಎಂದು ಧ್ವನಿಗೂಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ವಾರ್ಡ್‍ವಾರು ಪೌರಕಾರ್ಮಿಕರ ನೇಮಕ, ನಿಯೋಜನೆ ಮುಂತಾದ ಮಾಹಿತಿ ನೀಡುವಂತೆ ತಾಕೀತು ಮಾಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments