Webdunia - Bharat's app for daily news and videos

Install App

ಜಾತಿ ವ್ಯವಸ್ಥೆ ಮಾಡಿದ್ದು ದೇವರಲ್ಲ, ಸ್ವಾರ್ಥಿಗಳು: ಸಿಎಂ ಸಿದ್ದರಾಮಯ್ಯ

Webdunia
ಬುಧವಾರ, 1 ಫೆಬ್ರವರಿ 2017 (18:31 IST)
ಜಾತಿ ವ್ಯವಸ್ಥೆ ಮಾಡಿದ್ದು ದೇವರಲ್ಲ. ಸಮಾಜದಲ್ಲಿ ಬದುಕಲು ಅವಕಾಶ ಸಿಕ್ಕ ಸ್ವಾರ್ಥಿಗಳು ಜಾತಿ ವ್ಯವಸ್ಥೆ ನಿರ್ಮಾಣ ಮಾಡಿದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.
 
ಮೈಸೂರು ಜಿಲ್ಲೆಯ ಜೆ.ಕೆ.ಮೈದಾನದಲ್ಲಿ ಏರ್ಪಡಿಸಲಾಗಿದ್ದ ಶ್ರೀ ಮಾಚಿದೇವರ ಜಯಂತ್ಯುತ್ಸವ ಹಾಗೂ ಜಾಗೃತ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ಜಾತಿ ವ್ಯವಸ್ಥೆ ಆಳವಾಗಿ ಬೇರೂರಿದೆ. ಸಂತರು ಹಾಗೂ ಶರಣರು ಸಮಾಜದಲ್ಲಿ ಜಾತಿ ವ್ಯವಸ್ಥೆ ವಿರುದ್ಧ ಹೋರಾಟ ಮಾಡಿ ಜಾಗೃತಿ ಮೂಡಿಸಿದರು. ಅ7ರ ಕಲಿಯುವ ಅವಕಾಶ ಸಿಕ್ಕರೆ ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿಯುವುದಿಲ್ಲ. ಆದರೆ, ಶಿಕ್ಷಣದಿಂದ ವಂಚಿತರಾದವರ ಮೇಲಿನ ಶೋಷಣೆ ಹೆಚ್ಚಾಗತೊಡಗುತ್ತವೆ. ಇಂದಿಗೂ ಶೂದ್ರ ಜನಾಂಗ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಇಂತಹ ಜನಾಂಗಕ್ಕೆ ಶಿಕ್ಷಣದ ಅಗತ್ಯವಿದೆ ಎಂದು ತಿಳಿಸಿದರು. 
 
ಮಡಿವಾಳ ಜನಾಂಗವನ್ನು ಎಸ್‌ಎಸಿ ವರ್ಗಕ್ಕೆ ಸೇರಿಸಲು ಕ್ಯಾಬಿನೆಟ್‌ನಲ್ಲಿ ಚರ್ಚೆ ನಡೆಯಬೇಕು. ಅಲ್ಲಿನ ತೀರ್ಮಾನದಂತೆ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು. 
 
ಮಂದಿನ ವರ್ಷದಿಂದ ಮಡಿವಾಳ ಮಾಚಿದೇವರ ಜಯಂತ್ಯುತ್ಸವವನ್ನು ರಾಜ್ಯ ಸರಕಾರದ ವತಿಯಿಂದಲೇ ಆಚರಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments