Webdunia - Bharat's app for daily news and videos

Install App

ಚಿನ್ನ ವಂಚನೆ ಪ್ರಕರಣ: ಐಶ್ವರ್ಯ ಗೌಡ, ಶಾಸಕ ವಿನಯ್ ಕುಲಕರ್ಣಿಗೆ ಇಡಿ ಶಾಕ್‌

Sampriya
ಗುರುವಾರ, 24 ಏಪ್ರಿಲ್ 2025 (15:15 IST)
Photo Credit X
ಬೆಂಗಳೂರು: ಚಿನ್ನ ವಂಚನೆ ಪ್ರಕರಣ ಸಂಬಂಧ ಸುದ್ದಿಯಾಗಿದ್ದ ಐಶ್ವರ್ಯ ಗೌಡ  ಅವರ ಬೆಂಗಳೂರು ಹಾಗೂ ಮಂಡ್ಯದ ನಿವಾಸ, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಮನೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  

ವಿನಯ್ ಅವರ ಬೆಂಗಳೂರಿನಲ್ಲಿರುವ ಮನೆ ಹಾಗೂ ಐಶ್ವರ್ಯ ಅವರ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿರುವ ಮನೆ ಹಾಗೂ ಬೆಂಗಳೂರಿನ ನಿವಾಸದ ಮೇಲೆ ದಾಳಿ ನಡೆದಿದ್ದು, ಕಡತಗಳು ಹಾಗೂ ದಾಖಲೆಗಳ ಶೋಧ ನಡೆಸಿದ್ದಾರೆ.  ಇಬ್ಬರು ಸಿಆರ್​​ಪಿಎಫ್ ಸಿಬ್ಬಂದಿಯ ಭದ್ರತೆಯೊಂದಿಗೆ ಈ ದಾಳಿ ನಡೆಸಲಾಗಿದೆ.

ಈ ಹಿಂದೆ ಐಶ್ವರ್ಯ ಗೌಡ ವಿರುದ್ಧ ಸುಮಾರು ₹9 ಕೋಟಿ ಮೌಲ್ಯದ ಚಿನ್ನ ವಂಚನೆ ಆರೋಪ ಕೇಳಿಬಂದಿತ್ತು.

ವಾರಾಹಿ ವರ್ಲ್ಡ್‌ ಆಫ್‌ ಗೋಲ್ಡ್‌ ಜುವೆಲ್ಲರಿಯ ಮಾಲೀಕರಿಗೆ ಐಶ್ವರ್ಯ ಗೌಡ ವಂಚನೆ ಎಸಗಿದ್ದಾರೆ ಎಂಬ ಆರೋಪವಿದೆ. ಇಷ್ಟೇ ಅಲ್ಲದೆ, ಮಾಜ ಸಂಸದ ಡಿಕೆ ಸುರೇಶ್ ಹೆಸರಿನಲ್ಲಿ ವಂಚನೆ ಎಸಗಿದ್ದರು ಎನ್ನಲಾಗಿದೆ. ಈ ವಿಚಾರವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ 2024ರ ಡಿಸೆಂಬರ್​​ನಲ್ಲೇ ಡಿಕೆ ಸುರೇಶ್ ದೂರು ನೀಡಿದ್ದರು.

ಪ್ರಕರಣ ಸಂಬಂಧ 2024 ರ ಡಿಸೆಂಬರ್​​ನಲ್ಲಿ ಐಶ್ವರ್ಯ ಗೌಡ ಮತ್ತು ಆಕೆಯ ಪತಿ ಕೆಎನ್ ಹರೀಶ್ ಅವರನ್ನು ಬಂಧಿಸಲಾಗಿತ್ತು. ಅದಾದ ನಂತರ ಐಶ್ವರ್ಯ ಗೌಡ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

ಮುಂದಿನ ಸುದ್ದಿ
Show comments