Webdunia - Bharat's app for daily news and videos

Install App

ಸೆಕ್ಯೂರಿಟಿ ಗಾರ್ಡ್ ಗಳಿಂದಲೇ ಮನೆಯಲ್ಲಿನ ಚಿನ್ನಾಭರಣ ಕಳವು

Webdunia
ಗುರುವಾರ, 27 ಡಿಸೆಂಬರ್ 2018 (13:24 IST)
ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಹಾಡು ಹಗಲೇ ಸೆಕ್ಯೂರಿಟಿ ಗಾರ್ಡ್ ದಂಪತಿ ತಾವು ಕೆಲಸ ಮಾಡುತ್ತಿದ್ದ ಮನೆಗೆ ಕನ್ನ ಹಾಕಿದ್ದಾರೆ.

ಮನೆಯಲ್ಲಿದ್ದ ಚಿನ್ನಾಭರಣ ಹಾಗು ಬೆಲೆ ಬಾಳುವ ವಸ್ತುಗಳನ್ನು ಕದ್ದು ಸೆಕ್ಯುರಿಟಿ ಗಾರ್ಡ ದಂಪತಿ ಪರಾರಿಯಾಗಿರುವ ಘಟನೆ ಬೆಂಗಳೂರು ಹೊರವಲಯ ರಾಮಮೂರ್ತಿನಗರ ಪೋಲಿಸ್ ಠಾಣಾ ವ್ಯಾಪ್ತಿಯ ಹೊರಮಾವು ಗ್ರಾಮದಲ್ಲಿ ನಡೆದಿದೆ.

ಮನೆಯ ಮಾಲೀಕ ಪ್ರವೀಣ್ ಕುಮಾರ್ ಎಂಬುವರ ಮನೆಯಲ್ಲಿ ಒಂದು ವರ್ಷದಿಂದ ಸೆಕ್ಯೂರಿಟಿ ಗಾರ್ಡ್ ಆಗಿದ್ದ ನೇಪಾಳಿ ಮೂಲದ ಮಂಗಲ್ ಹಾಗೂ ಸೌಭಾಗ್ಯ ದೇವಿ ಎಂಬುವವರು ಕೆಲಸ ಮಾಡುತ್ತಿದ್ದರು. ಮುಂಜಾನೆ ಮನೆಯ ಮಾಲೀಕ ಪ್ರವೀಣ್ ಕುಮಾರ್ ದಂಪತಿ ಕೆಲಸದ ನಿಮಿತ್ತ  ಹೊರಗಡೆ ಹೋದ ಸಂದರ್ಭದಲ್ಲಿ ಮನೆಯಲ್ಲಿನ ಬೀರು ಬೀಗ ಒಡೆದು ಬೀರುವಿನಲ್ಲಿದ್ದ 750 ಗ್ರಾಂ ಚಿನ್ನಾಭರಣ ಹಾಗು ಬೆಲೆ ಬಾಳುವ ವಸ್ತುಗಳನ್ನು ಕದ್ದಿದ್ದಾರೆ.  ಕಳ್ಳತನ ಮಾಡಿರುವ ಸುಳಿವು ಸಿಗಬಾರದು ಎಂದು ಮನೆಯಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾದ ಸಮೇತ ಪರಾರಿಯಾಗಿದ್ದಾರೆ.

ಪ್ರವೀಣ್ ಕುಮಾರ್ ದಂಪತಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.  ಮನೆ ಮಾಲೀಕ ಪ್ರವೀಣ್ ಕುಮಾರ್ ರಾಮಮೂರ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದು,  ಆ ಖತರ್ನಾಕ್ ದಂಪತಿ ಹುಡುಕಾಟದಲ್ಲಿ ಪೊಲೀಸರು ತೊಡಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments