ಚಿನ್ನದ ಸಾಧಕರು ನಾಡಿಗೆ ಹೆಮ್ಮೆ..!!

Webdunia
ಶನಿವಾರ, 10 ಸೆಪ್ಟಂಬರ್ 2022 (14:38 IST)
ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಚಿನ್ನದ ಹೊಳಪಿನಲ್ಲಿ ಕಂಗೊಳಿಸಿದರು.
 
ಹಾಸನದ ಕೃಷಿ ಮಹಾವಿದ್ಯಾಲಯದಲ್ಲಿ ಓದಿದ ತುಮಕೂರಿನ ಎಚ್.ಎಂ.ಚಂದನಾ ಬಿಎಸ್ಸಿ (ಆನರ್ಸ್‌) ಕೃಷಿಯಲ್ಲಿ 11 ಚಿನ್ನದ ಪದಕ ದಕ್ಕಿಸಿಕೊಂಡು ಚಿನ್ನದ ಬೆಡಗಿಯಾಗಿ ಕಂಗೊ
ಳಿಸಿದರು. ಜತೆಗೆ, ದಾನಿಗಳ 5 ಚಿನ್ನದ ಪದಕ ಪ್ರಮಾಣ ಪತ್ರಗಳೂ ಸಿಕ್ಕಿವೆ.
 
ರಾಜ್ಯಪಾಲ ಥಾವರಚಂದ್ ಗೆಹಲೋತ್ ಪದಕ ಪ್ರದಾನ ಮಾಡು
ತ್ತಿದ್ದಂತೆ ತಂದೆ ಸುರೇಶ್‌, ತಾಯಿ ಶಶಿಕಲಾ ಚಪ್ಪಾಳೆ ತಟ್ಟಿ ಸಂಭ್ರಮಿಸಿದರು. 16 ಪದಕ ಗಳಿಸಿದ ಚಂದನಾ
ಸಾಧನೆಗೆ ಸಾಕ್ಷಿಯಾಗಲು ಪ್ರಾಧ್ಯಾಪಕ ಚನ್ನಕೇಶ ಬಂದಿದ್ದರು. ಪುತ್ರಿಯ ಸಾಧನೆಗೆ ತಂದೆ ಚಿನ್ನದ ಬಳೆ ಕೊಡುಗೆಯಾಗಿ ನೀಡಿದರು.
 
ರೂಪಾಗೆ 8 ಚಿನ್ನದ ಪದಕ: ಮಂಡ್ಯದ ಹುಡುಗಿ ಎಂ.ಎನ್‌.ರೂಪಾ ಬಿಎಸ್ಸಿ ಕೃಷಿಯಲ್ಲಿ ಒಟ್ಟು 8 ಚಿನ್ನದ ಪದಕ ಪಡೆದು ಮಿಂಚಿದರು.
 
'ತಂದೆ ಮಳವಳ್ಳಿಯಲ್ಲಿ ಟೀ ಅಂಗಡಿ ನಡೆಸುತ್ತಿದ್ದಾರೆ. ಊರಿನಲ್ಲಿ 20 ಗುಂಟೆ ಕೃಷಿ ಜಮೀನಿದೆ. ಟೀ ಅಂಗಡಿಯಿಂದ ಬರುವ ಆದಾಯದಲ್ಲೇ ಶಿಕ್ಷಣ ಕೊಡಿಸಿದರು' ಎಂದರು ಮಂಡ್ಯದ ಕೃಷಿ ಕಾಲೇಜಿನ ವಿದ್ಯಾರ್ಥಿನಿ ರೂಪಾ..
 
ಘಟಿಕೋತ್ಸವದಲ್ಲಿ 47 ವಿದ್ಯಾರ್ಥಿನಿಯರು, 18 ವಿದ್ಯಾರ್ಥಿಗಳಿಗೆ ಒಟ್ಟು 156 ಚಿನ್ನದ ಪದಕ ಪ್ರದಾನ ಮಾಡಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೌರಾಯುಕ್ತೆಗೆ ಧಮ್ಕಿ ಪ್ರಕರಣ, ಕೊನೆಗೂ ಕೈ ನಾಯಕ ರಾಜೀವ್ ಗೌಡ ಲಾಕ್‌

ಕರ್ನಾಟಕ ಬಾಂಗ್ಲಾ ನಿವಾಸಿಗಳ ತವರೂರು: ಅವರನ್ನು ಓಡಿಸಲು ಎಸ್‌ಐಆರ್ ಜಾರಿಗೊಳಿಸಲು ಯತ್ನಾಳ್ ಒತ್ತಾಯ

ಬಾಹ್ಯಾಕಾಶದಲ್ಲಿ ಭಾರತದ ಪತಾಕೆ ಹಾರಿಸಿದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಗೌರವ

ಮನರೇಗಾ ಉಳಿಸಲು ರಾಜಭವನ ಚಲೊ: ಕೇಂದ್ರ ಸರ್ಕಾರದ ವಿರುದ್ಧ ತೊಡೆತಟ್ಟಿದ ಡಿಕೆಶಿ

ಗಣತಂತ್ರ ವ್ಯವಸ್ಥೆಗೆ ಪವಿತ್ರ ಸಂವಿಧಾನವೇ ಅಧಿಪತಿ: ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments