Publish Date: Sat, 07 May 2022 (11:00 IST)
Updated Date: Sat, 07 May 2022 (11:02 IST)
ಬೆಂಗಳೂರು : ಜಾಲಹಳ್ಳಿಯ ಅಯ್ಯಪ್ಪ ದೇವಾಲಯದ 55ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಗರ್ಭಗುಡಿಯ ಚಿನ್ನ ಲೇಪನ ಲೋಕಾರ್ಪಣೆ ಕಾರ್ಯಕ್ರಮ ದೇವಾಲಯದ ಆಡಳಿತ ಮಂಡಳಿಯಿಂದ ನೆರವೆರಿತು.
ದಕ್ಷಿಣ ಭಾರತದಲ್ಲೇ ಶಬರಿಮಲೆಯ ಬಳಿಕ ಅತ್ಯಂತ ಪ್ರಸಿದ್ಧಿ ಪಡೆದಿರುವ ಅಯ್ಯಪ್ಪನ ದೇವಾಲಯವಾಗಿರುವ ಬೆಂಗಳೂರಿನ ಜಾಲಹಳ್ಳಿನಲ್ಲಿರುವ ಅಯ್ಯಪ್ಪ ದೇವಾಲಯದ 55ನೇ ವಾರ್ಷಿಕೊತ್ಸವವು ಸಕಲ ಧಾರ್ಮಿಕ ವಿಧಿವಿಧಾನಗಳ ಪ್ರಕಾರ ನಡೆಯಿತು.
ಶಬರಿ ಮಲೆಯ ಅಯ್ಯಪ್ಪ ದೇವಸ್ಥಾನದ ಮಾದರಿಯಲ್ಲೇ ಜಾಲಹಳ್ಳಿಯ ಅಯ್ಯಪ್ಪ ದೇಗುಲದ ಗರ್ಭಗುಡಿಯಲ್ಲೂ ಚಿನ್ನದ ಲೇಪನ ಮಾಡಲಾಗಿತ್ತು.
ಸುಮಾರು 15 ವರ್ಷಗಳ ಚಿನ್ನದ ಲೇಪನದ ಕನಸು ಇಂದು ಈಡೇರಿದೆ. 11 ಕೆ.ಜಿ ಚಿನ್ನವನ್ನು ಬಳಸಿಕೊಂಡು ದೇವಾಲಯದ ಗರ್ಭಗುಡಿಗೆ ಚಿನ್ನದ ಲೇಪನದ ತಗಡನ್ನು ಯಶಸ್ವಿಯಾಗಿ ಆಳವಡಿಕೆ ಮಾಡಲಾಗಿದ್ದು, ಇಂದು ಬೆಳಗ್ಗೆ ಭಕ್ತರ ದರ್ಶನಕ್ಕೆ ಲೋಕಾರ್ಪಣೆ ಮಾಡಲಾಯಿತು ಎಂದು ಆಡಳಿತ ಮಂಡಳಿ ತಿಳಿಸಿದೆ.