Webdunia - Bharat's app for daily news and videos

Install App

Gold Smuggling Case: ಕೊನೆ ಹಂತದಲ್ಲಿ ನಟಿ ರನ್ಯಾ ಜಾಮೀನು ಅರ್ಜಿ ವಿಚಾರಣೆ

Sampriya
ಮಂಗಳವಾರ, 25 ಮಾರ್ಚ್ 2025 (19:24 IST)
ಬೆಂಗಳೂರು: 12 ಕೋಟಿ ಮೌಲ್ಯದ 15ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸುವ ವೇಳೆ ಸಿಕ್ಕಿಬಿದ್ದು ಜೈಲುಪಾಲಾಗಿರುವ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಮಂಗಳವಾರ ಪೂರ್ಣಗೊಳಿಸಿದ ವಿಶೇಷ ನ್ಯಾಯಾಲಯ ಮಾರ್ಚ್ 27ಕ್ಕೆ ತೀರ್ಪು ಕಾಯ್ದಿರಿಸಿದೆ.

ರನ್ಯಾ ರಾವ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ 64ನೇ ಸಿಸಿಹೆಚ್​​ ಕೋರ್ಟ್​, ಪ್ರತಿವಾದಿ ಮತ್ತು ಪ್ರಾಸಿಕ್ಯೂಷನ್ ಎರಡೂ ಕಡೆಯ ವಿವರವಾದ ವಾದಗಳನ್ನು ಆಲಿಸಿ, ಆದೇಶವನ್ನು ಇದೀಗ ಕಾಯ್ದಿರಿಸಿದೆ.

ವಿಚಾರಣೆಯ ಸಮಯದಲ್ಲಿ, ರನ್ಯಾ ರಾವ್ ಪರ ವಕೀಲ ಕಿರಣ್ ಜವಳಿ ಅವರು, ತಮ್ಮ ಕಕ್ಷಿದಾರರಿಗೆ ಜಾಮೀನು ನೀಡುವಂತೆ ವಾದ ಮಂಡಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಕಂದಾಯ ಗುಪ್ತಚರ ನಿರ್ದೇಶನಾಲಯದ(ಡಿಆರ್‌ಐ) ವಕೀಲ ಮಧು ರಾವ್ ಅವರು ಅಕ್ರಮ ಹಣ ವರ್ಗಾವಣೆಯಲ್ಲಿ ಅವರ ನೇರ ಪಾತ್ರವನ್ನು ಸೂಚಿಸುವ ಪುರಾವೆಗಳಿವೆ ಎಂದರು.

ಪ್ರಾಸಿಕ್ಯೂಷನ್ ಪ್ರಕಾರ, ನಟಿ ಚಿನ್ನ ಖರೀದಿಗೆ ಅನುಕೂಲವಾಗುವಂತೆ ಹವಾಲಾ ಮಾರ್ಗಗಳನ್ನು ಬಳಸಿರುವುದಾಗಿ ಒಪ್ಪಿಕೊಂಡಿದ್ದಾರೆ, ಇದು ಅವರ ವಿರುದ್ಧದ ಪ್ರಕರಣವನ್ನು ಬಲಪಡಿಸುತ್ತದೆ.

ಕಾನೂನು ಪ್ರಕ್ರಿಯೆಯ ಭಾಗವಾಗಿ, ಅಧಿಕಾರಿಗಳು ಕಸ್ಟಮ್ಸ್ ಕಾಯ್ದೆಯ ಸೆಕ್ಷನ್ 108 ಅನ್ನು ಅನ್ವಯಿಸಿದ್ದಾರೆ, ಇದು ನ್ಯಾಯಾಂಗ ತನಿಖೆಯನ್ನು ಕಡ್ಡಾಯಗೊಳಿಸುತ್ತದೆ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

ಮುಂದಿನ ಸುದ್ದಿ
Show comments