Webdunia - Bharat's app for daily news and videos

Install App

ಮತದಾರರ ಪಟ್ಟಿಯಲ್ಲಿ ಗೋಲ್ಮಾಲ್! ಪೊಲೀಸರ ವಶಕ್ಕೆ

Webdunia
ಶನಿವಾರ, 19 ನವೆಂಬರ್ 2022 (08:35 IST)
ಬೆಂಗಳೂರು : ಕಾನೂನುಬಾಹಿರವಾಗಿ ಮತದಾರರ ಗೌಪ್ಯ ಮಾಹಿತಿ ಸಂಗ್ರಹಿಸಿದ ಆರೋಪ ಎದುರಿಸ್ತಿರೋ ಚಿಲುಮೆ ಸಂಸ್ಥೆ, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲೂ ಹಸ್ತಕ್ಷೇಪ ನಡೆಸಿರೋ ಅನುಮಾನಗಳು ವ್ಯಕ್ತವಾಗಿವೆ.

ಹಗರಣದ ತನಿಖೆಯ ಸುಳಿವರಿತ ಬಿಬಿಎಂಪಿ ಚಿಲುಮೆಗೆ ನವೆಂಬರ್ 2ರಂದು ನೊಟೀಸ್ ನೀಡಿತ್ತು. ಇದಾದ 10 ದಿನಗಳಿಗೆ (ನ.13) ಕಚೇರಿಗಳ ಬಾಗಿಲು ಬಂದ್ ಮಾಡಿದೆ. 3 ತಿಂಗಳಿಗೆ ಅಗ್ರಿಮೆಂಟ್ ಇದ್ರು 2 ತಿಂಗಳಿಗೆ ಬಸವನಗುಡಿ ಕಚೇರಿಯನ್ನು ಖಾಲಿ ಮಾಡಿದೆ.

ನಂತರ ಸರ್ಚ್ ವಾರೆಂಟ್ ಪಡೆದು ಪರಿಶೀಲನೆ ನಡೆಸಿರುವ ಹಲಸೂರು ಗೇಟ್ ಪೊಲೀಸರು, ಮಹತ್ವದ ದಾಖಲೆಗಳನ್ನು ಸೀಜ್ ಮಾಡಿದ್ದಾರೆ. ನಾಲ್ವರು ಸಿಬ್ಬಂದಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆದ್ರೆ, ಚಿಲುಮೆಯ ಮುಖ್ಯಸ್ಥರು ಇನ್ನೂ ಸಿಕ್ಕಿಬಿದ್ದಿಲ್ಲ.

ಚಿಲುಮೆ ವಿರುದ್ಧ ದೂರು ದಾಖಲಾದ ಬೆನ್ನಲ್ಲೇ, ತನಿಖಾಧಿಕಾರಿಯನ್ನು ನೇಮಿಸಿರೋ ಮುಖ್ಯ ಚುನಾವಣಾಧಿಕಾರಿ, ವರದಿಗೆ ಸೂಚಿಸಿದ್ದಾರೆ. ಈ ಮಧ್ಯೆ, ಬಿಬಿಎಂಪಿ ಕೂಡ, ಮಹದೇವಪುರ ಕಂದಾಯಾಧಿಕಾರಿ ಚಂದ್ರಶೇಖರ್ ಅವರನ್ನ ಅಮಾನತು ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments