Select Your Language

Notifications

webdunia
webdunia
webdunia
webdunia

ಹೋಗಿದ್ದು ಬಹಿರ್ದೆಸೆಗೆ, ಬಿದ್ದಿದ್ದು ತೆರೆದ ಬಾವಿಗೆ

ಹೋಗಿದ್ದು ಬಹಿರ್ದೆಸೆಗೆ, ಬಿದ್ದಿದ್ದು ತೆರೆದ ಬಾವಿಗೆ
bangalore , ಶುಕ್ರವಾರ, 13 ಮೇ 2022 (19:21 IST)
ರಾತ್ರಿ ವೇಳೆ ಬಹಿರ್ದೆಸೆಗೆ ತೆರಳುತ್ತಿದ್ದ ವ್ಯಕ್ತಿಯೋರ್ವ ಕಾಲು ಜಾರಿ ಸುಮಾರು 60 ಅಡಿ ಆಳದ ತೆರೆದ ಬಾವಿಗೆ ಬಿದ್ದ ಘಟನೆ ಜಿಲ್ಲೆಯ ಸೊರಬ ತಾಲೂಕಿನ ಹೊಸಬಾಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎನ್. ದೊಡ್ಡೇರಿ ಗ್ರಾಮದಲ್ಲಿ ನಡೆದಿದೆ.ಬಾವಿಗೆ ಬಿದ್ದ ವ್ಯಕ್ತಿಯನ್ನು ಹನುಮಂತಪ್ಪ  ಎಂದು ಗುರುತಿಸಲಾಗಿದೆ. ಬಾವಿಗೆ ಬಿದ್ದ ಹನುಮಂತಪ್ಪ ನಂತರ ಮೇಲೆ ಬರಲು ಪ್ರಯತ್ನಿಸಿದ್ದಾರೆ. ಆದರೆ ಸಾಧ್ಯವಾಗಲಿಲ್ಲ. ನಂತರ ರಕ್ಷಣೆ ಮಾಡುವಂತೆ ಕೂಗಾಡಿಕೊಂಡಿದ್ದಾರೆ. ಹನುಮಂತಪ್ಪನ ಕೂಗಾಟ ಕೇಳಿ ಸ್ಥಳೀಯರು ಬಾವಿಯ ಬಳಿ ಜಮಾಯಿಸಿದ್ದಾರೆ. ನಂತರ ಅಗ್ನಿಶಾಮಕ ಸಿಬ್ಬಂದಿ ಗಮನಕ್ಕೆ ವಿಷಯ ತಿಳಿಸಿದ್ದಾರೆ.ಕ್ಷಣಾರ್ಧದಲ್ಲಿಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಸತತ ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ, ಬಾವಿಗೆ ಬಿದ್ದ ವ್ಯಕ್ತಿಯನ್ನು ಸುರಕ್ಷಿತವಾಗಿ ಮೇಲಕ್ಕೆ ಕರೆ ತಂದಿದ್ದಾರೆ. ಸಣ್ಣಪುಟ್ಟ ಗಾಯವಾಗಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆಗೆ ಸೊರಬದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ

Share this Story:

Follow Webdunia kannada

ಮುಂದಿನ ಸುದ್ದಿ

ವೇದಿಕೆ ಮೇಲೆ ಉರುಳಿದ ಲೈಟಿಂಗ್ ಟ್ರೇಸ್