ಬೆಂಗಳೂರು: ಬಿಎಂಟಿಸಿ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಎರಡನೇ ಹಂತದ ಪ್ರಯಾಣ ದರ 10 ರೂ. ಗೆ ಇಳಿಸಲು ಚಿಂತನೆ ನಡೆಸಿದೆ.
ಈ ಮೊದಲು ಇದು 12 ರೂ. ಇತ್ತು. ಇದೀಗ ಪ್ರಯಾಣಿಕರನ್ನು ಸೆಳೆಯಲು ಮತ್ತು ಚಿಲ್ಲರೆ ಸಮಸ್ಯೆ ಪರಿಹರಿಸಲು ರಾಜ್ಯ ಸರ್ಕಾರ ಪ್ರಯಾಣ ದರ ಕಡಿಮೆ ಮಾಡುವ ನಿರ್ಧಾರಕ್ಕೆ ಬಂದಿದೆ. ಈ ಬಗ್ಗೆ ಸಾರಿಗೆ ಇಲಾಖೆ ಮೂಲಗಳೇ ಸ್ಪಷ್ಟಪಡಿಸಿವೆ. ಸದಾ ಬಸ್ ದರ ಏರಿಕೆ ಸುದ್ದಿ ಕೇಳಿ ಕೇಳಿ ಬೇಸತ್ತಿರುವ ಪ್ರಯಾಣಿಕರಿಗೆ ಈ ಸುದ್ದಿ ನಿಜಕ್ಕೂ ಸಂತಸ ತರಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.