Webdunia - Bharat's app for daily news and videos

Install App

ಬಿಪಿಎಲ್ ಕಾರ್ಡ್ ದಾರರಿಗೆ ಮುಂದಿನ ವಾರದಿಂದ ಈ ಸೌಲಭ್ಯಗಳು ಗ್ಯಾರಂಟಿ

Krishnaveni K
ಸೋಮವಾರ, 14 ಅಕ್ಟೋಬರ್ 2024 (09:59 IST)
ಬೆಂಗಳೂರು: ಬಿಪಿಎಲ್ ಕಾರ್ಡ್ ದಾರರಿಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆ ನೀಡುತ್ತಿದೆ. ಇದೀಗ ಬಿಪಿಎಲ್ ಕಾರ್ಡ್ ದಾರರಿಗೆ ಮುಂದಿನ ವಾರದಿಂದ ಸಿಹಿ ಸುದ್ದಿಯೊಂದು ಸಿಗಲಿದೆ.

ಅನ್ನ ಭಾಗ್ಯ ಯೋಜನೆಯಡಿ 5 ಕೆ.ಜಿ. ಅಕ್ಕಿ ಮತ್ತು ಉಳಿದ 5 ಕೆಜಿ ಅಕ್ಕಿ ಬಾಬ್ತು ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮೆ ಮಾಡುವುದಾಗಿ ಸರ್ಕಾರ ಘೋಷಿಸಿತ್ತು. ಆದರೆ ಕಳೆದ ಕೆಲವು ತಿಂಗಳಿನಿಂದ ಹಣ ಬರುತ್ತಿಲ್ಲ ಎಂಬ ಆರೋಪಗಳೂ ಕೇಳಿಬರುತ್ತಿವೆ. ಇದರ ಬಗ್ಗೆ ಈಗ ಆಹಾರ ಸಚಿವ ಕೆಎಚ್ ಮುನಿಯಪ್ಪ ಗುಡ್ ನ್ಯೂಸ್ ನೀಡಿದ್ದಾರೆ.

ಕಳೆದ ಕೆಲವು ತಿಂಗಳಿನಿಂದ ಹಣ ಜಮೆ ಆಗಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸರ್ವರ್ ಸಮಸ್ಯೆ ಕಾರಣದಿಂದ ಹಣ ಜಮೆ ಆಗಿರಲಿಲ್ಲ. ಹೀಗಾಗಿ ಸ್ವಲ್ಪ ಸಮಸ್ಯೆಯಾಗಿತ್ತು. ಆದರೆ ಮುಂದಿನ ವಾರದಿಂದ ಫಲಾನುಭವಿಗಳ ಖಾತೆಗೆ ಇದುವರೆಗೆ ಬಾರದೇ ಇರುವ ಕಂತುಗಳೂ ಸೇರಿದಂತೆ ಎಲ್ಲಾ ಕಂತಿನ ಹಣ ಜಮೆ ಆಗಲಿದೆ ಎಂದು ಮುನಿಯಪ್ಪ ಹೇಳಿದ್ದಾರೆ.

ಪ್ರತೀ ತಿಂಗಳು 10 ರಂದು ಹಣ ಬಿಡುಗಡೆಯಾಗುತ್ತಿತ್ತು. ಆದರೆ ಸರ್ವರ್ ಸಮಸ್ಯೆಯಿಂದ ಹಣ ಬಿಡುಗಡೆ ವಿಳಂಬವಾಗಿದೆ. ಜೊತೆಗೆ ಬಿಪಿಎಲ್ ಕಾರ್ಡ್ ಗೆ ಅರ್ಹರಾದವರನ್ನು ಗುರುತಿಸುವ ಕೆಲಸವಾಗುತ್ತಿದೆ. ಮುಂದಿನ ವಾರದಿಂದ ಬಿಪಿಎಲ್ ಅರ್ಹತೆ ಪರಿಶೀಲಿಸಿ ಅರ್ಹರಿಗೆ ಹಣ ಜಮೆ ಆಗಲಿದೆ ಎಂದಿದ್ದಾರೆ. ಫಲಾನುಭವಿಗಳ ಖಾತೆಗೆ ಪ್ರತಿ ಕೆಜಿ ಅಕ್ಕಿಗೆ 34 ರೂ.ನಂತೆ ತಿಂಗಳಿಗೆ 5 ಕೆಜಿ ಅಕ್ಕಿ ಬಾಬ್ತು 170 ರೂ. ಹಣ ಜಮೆ ಆಗಬೇಕಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ತಣ್ಣಗಾಯಿತೇ ಮಳೆಯ ಅಬ್ಬರ, ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಮುಂದಿನ ಸುದ್ದಿ
Show comments