Webdunia - Bharat's app for daily news and videos

Install App

ಇ ಶ್ರಮ್ ನೊಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್: ರೇಷನ್ ಕಾರ್ಡ್ ಪಡೆದುಕೊಳ್ಳಲು ಹೀಗೆ ಮಾಡಿ

Krishnaveni K
ಗುರುವಾರ, 7 ನವೆಂಬರ್ 2024 (08:47 IST)
ಬೆಂಗಳೂರು: ರಾಜ್ಯ ಸರ್ಕಾರ ಇ ಶ್ರಮ್ ನೊಂದಾಯಿತ ಅರ್ಹ ಕಾರ್ಮಿಕರಿಗೆ ರೇಷನ್ ಕಾರ್ಡ್ ಪಡೆಯಲು ಆಹಾರ ಮತ್ತು ನಾಗರಿಕ ಸೇವಾ ಇಲಾಖೆ ಅವಕಾಶ ನೀಡಿದೆ. ಅರ್ಹ ಕಾರ್ಮಿಕರಿಗೆ ಪಡಿತರ ಚೀಟಿ ವಿತರಿಸಲು ಆರಂಭಿಸಿದೆ.

ಅರ್ಹ ಇ ಶ್ರಮ್ ಕಾರ್ಮಿಕರಿಗೆ ಆಹಾರ ಮತ್ತು ನಾಗರಿಕಾ ಇಲಾಖೆಯಿಂದ ಆದ್ಯತಾ ಪಡಿತರ ಚೀಟಿ ಸಿಗಲಿದೆ. ಇದನ್ನು ನಿಮ್ಮ ಹತ್ತಿರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗೆ  ಟೋಲ್ ಫ್ರೀ ನಂಬರ್ 18004259339 ಅಥವಾ ಸಹಾಯವಾಣಿ 1967 ಕ್ಕೆ ಬೆಳಿಗ್ಗೆ 10 ರಿಂದ ಸಂಜೆ 5.30 ರೊಳಗಾಗಿ ಕರೆ ಮಾಡಬಹುದಾಗಿದೆ.

ಆದ್ಯತಾ ಪಡಿತರ ಚೀಟಿ ಹೊಂದಿರುವವರಿಗೆ ಸಿಗುವ ಸೌಲಭ್ಯಗಳೇನು
ಆದ್ಯತಾ ಪಡಿತರ ಚೀಟಿಯನ್ನು ಹೊಂದಿರುವ ಒಂದು ಕುಟುಂಬವು ಪ್ರತೀ ವ್ಯಕ್ತಿಗೆ 5 ಕಿ.ಗ್ರಾಂನಂತೆ ಒಂದು ತಿಂಗಳಲ್ಲಿ ಆಹಾರ ಧಾನ್ಯಗಳನ್ನು ಸಬ್ಸಿಡಿ ದರದಲ್ಲಿ ನೀಡಲಾಗುತ್ತದೆ. ಈ ಪಡಿತರ ಚೀಟಿ ಹೊಂದಿದವರಿಗೆ ಅಕ್ಕಿ ಪ್ರತೀ ಕೆ.ಜಿಗೆ 3 ರೂ., ಗೋಧಿ 2 ರೂ.ಗಳಿಗೆ ಸಿಗುತ್ತದೆ. ಈ ಬೆಲೆಯನ್ನು ಕಾಲ ಕಾಲಕ್ಕೆ ಪರಿಷ್ಕರಿಸಲಾಗುತ್ತದೆ.

ಸರ್ಕಾರವು ನಿಗದಿಪಡಿಸಿದ ಮಾನದಂಡಗಳಿಗೆ ಅನುಗುಣವಾಗಿ ಇರುವವರಿಗೆ ಆದ್ಯತಾ ಪಡಿತರ ಚೀಟಿ ವಿತರಿಸಲಾಗುತ್ತಿದೆ. ತಕ್ಷಣವೇ ಇದನ್ನು ಪಡೆದುಕೊಂಡು ಸರ್ಕಾರದ ಸೌಲಭ್ಯಗಳ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಕಂಬಕ್ಕೆ ಕಟ್ಟಿ ಯೋಧನ ಮೇಲೆ ಏಕಾಏಕಿ ದಾಳಿ ನಡೆಸಿದ ಗುಂಪು, Viral Video

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಮುಂದಿನ ಸುದ್ದಿ
Show comments