Webdunia - Bharat's app for daily news and videos

Install App

ಪೋಷಕರಿಗೆ ಸರಕಾರದಿಂದ ಗುಡ್ ನ್ಯೂಸ್

Webdunia
ಶನಿವಾರ, 18 ಮೇ 2019 (14:37 IST)
ಮಕ್ಕಳ ಶಿಕ್ಷಣಕ್ಕಾಗಿ ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿದ್ದ  ಪೋಷಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ.

ಪ್ರಸಕ್ತ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ಪ್ರೀ ನರ್ಸರಿ ತರಗತಿಗಳನ್ನು ಆರಂಭಿಸುವ ಮೂಲಕ ಸರ್ಕಾರಿ ಶಾಲೆಗಳತ್ತ ಪೋಷಕರು ಆಕರ್ಷಿತರಾಗುವಂತೆ ಮಹತ್ತರ ಹೆಜ್ಜೆ ಇಟ್ಟಿದೆ.

ತಮ್ಮ ಮಕ್ಕಳ ಪೂರ್ವಪ್ರಾಥಮಿಕ ಶಿಕ್ಷಣಕ್ಕಾಗಿ ಅದರಲ್ಲೂ ಫ್ರೀ ಕೆ.ಜಿ., ಎಲ್.ಕೆ.ಜಿ, ಯುಕೆಜಿಗಳಿಗಾಗಿ  ಬಹುತೇಕ ಪಾಲಕರು ಖಾಸಗಿ ಶಾಲೆಗಳಲ್ಲಿಯೇ ಹೆಚ್ಚಾಗಿ ಮಕ್ಕಳನ್ನು ದಾಖಲಿಸುತ್ತಿದ್ದರು. ಇದರಿಂದಾಗಿ ಸರ್ಕಾರಿ ಶಾಲೆಗಳತ್ತ ಮಕ್ಕಳ ಆಕರ್ಷಣೆ ಹಾಗೂ ಪೋಷಕರ ಒಲವು ಕಡಿಮೆಯಾಗುತ್ತಿತ್ತು. ಇದೆಲ್ಲವನ್ನು ಮನಗಂಡ ರಾಜ್ಯ ಸರ್ಕಾರ ಆಯ್ದ 4,100 ಅಂಗನವಾಡಿ ಕೇಂದ್ರಗಳನ್ನು ಪ್ರಾಥಮಿಕ ಶಾಲೆಗಳ ಆವರಣಕ್ಕೆ ಸಿದ್ಧತೆ ನಡೆಸಿದೆ.

ಈ ಅಂಗನವಾಡಿ ಕೇಂದ್ರಗಳನ್ನು ಬಾಲ ಸ್ನೇಹಿ‌ಕೇಂದ್ರಗಳನ್ನಾಗಿಸುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ದಿಟ್ಟ ಕ್ರಮಕೈಗೊಂಡಿದೆ. ಬಾಲಸ್ನೇಹಿ ಕೇಂದ್ರಗಳಲ್ಲಿ ಎಲ್.ಕೆ.ಜಿ, ಯುಕೆಜಿಯಂತಹ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ಯೋಜನೆ ರೂಪಿಸಿದೆ. 2019-20 ನೇ ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ 276 ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಈ ತರಗತಿಗಳನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿದೆ.

2017-18 ರಲ್ಲಿ 176 ಹಾಗೂ ಈ ವರ್ಷ 100  ಕೆಪಿಎಸ್ ಶಾಲೆಗಳನ್ನು ಪ್ರಾರಂಭ ಮಾಡಲಾಗಿದೆ. ಈ ಪಬ್ಲಿಕ್ ಶಾಲೆಗಳಲ್ಲಿ ಮೊದಲ ಹಂತದ ಪ್ರೀ ನರ್ಸರಿ ಶಾಲಾತರಗತಿಗಳನ್ನು ಪ್ರಾರಂಭಿಸಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments