Webdunia - Bharat's app for daily news and videos

Install App

ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ : ಸಂಭಾವನೆ ಹೆಚ್ಚಳಕ್ಕೆ ಚಿಂತನೆ

Webdunia
ಸೋಮವಾರ, 16 ಆಗಸ್ಟ್ 2021 (13:43 IST)
ಯಾದಗಿರಿ (ಆ.16): ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಇಂಗ್ಲಿಷ್ ಹಾಗೂ ಗಣಿತ ವಿಷಯಗಳ ಅತಿಥಿ ಶಿಕ್ಷಕರ ನೇಮಕಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

 ನಗರದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾದಗಿರಿ ಮತ್ತಿತರೆ ಜಿಲ್ಲೆಗಳಲ್ಲಿ ಈ ಬಗ್ಗೆ ಹೆಚ್ಚಿನ ಮಹತ್ವ ವಹಿಸಲಾಗುವುದು. ಅತಿಥಿ ಶಿಕ್ಷಕರ ಸಂಭಾವನೆ ಸೇರಿದಂತೆ ಒಂದಿಷ್ಟು ಬೇಡಿಕೆಗಳ ಬಗ್ಗೆಯೂ ಗಮನ ಹರಿಸಲಾಗುವುದು ಎಂದರು.
ಸಿಇಟಿ ಹಾಗೂ ಟಿಇಟಿ ಪರೀಕ್ಷೆಗಳಲ್ಲಿನ ಮಾನದಂಡಗಳಲ್ಲಿ ಏರಿಕೆಯಿದ್ದರಿಂದ ಈ ಭಾಗದಲ್ಲಿ ಶಿಕ್ಷಕರ ಕೊರತೆ ಕಾಡುತ್ತಿದೆ. ಬೇರೆ ಜಿಲ್ಲೆಯಿಂದ ನೇಮಕಾತಿಗೊಂಡವರು ಇಲ್ಲಿಗೆ ಬಂದು ವರ್ಗಾವಣೆಗೊಳ್ಳುವುದು ಶಿಕ್ಷಣ ಇಲಾಖೆಯಲ್ಲಷ್ಟೇ ಅಲ್ಲ, ಆರೋಗ್ಯ ಸೇರಿದಂತೆ ಕೆಲವೊಂದು ಇಲಾಖೆಗಳನ್ನೂ ಇದೆ. ಈಗ ಈ ಭಾಗದ ಕೊರತೆ ನೀಗಿಸಲು ಇಲ್ಲಿಗನುಗುಣವಾಗಿ ಶಿಕ್ಷಕರ ನೇಮಕಕ್ಕೆ ಸಿಇಟಿ, ಟಿಇಟಿ ನಡೆಸುವ ಇರಾದೆಯಿದೆ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments