Select Your Language

Notifications

webdunia
webdunia
webdunia
webdunia

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಕೂಡಲೇ ಅರ್ಜಿ ಸಲ್ಲಿಸಿ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಕೂಡಲೇ ಅರ್ಜಿ ಸಲ್ಲಿಸಿ
ಹಾಸನ , ಮಂಗಳವಾರ, 9 ಜೂನ್ 2020 (15:29 IST)
ಉದ್ಯೋಗಾಕಾಂಕ್ಷಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕೇಂದ್ರ ಸರ್ಕಾರದಿಂದ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಖಾಂತರ ಅನುಷ್ಟಾನಗೊಳಿಸಲಾಗುತ್ತಿರುವ ಪೋಷಣ್ ಅಭಿಯಾನ ಯೋಜನೆಯಡಿ ಹೊಳೆನರಸೀಪುರ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸಲು ತಾಲ್ಲೂಕು ಸಂಯೋಜಕರ ಹುದ್ದೆಗಳಿಗೆ  ಈಗಾಗಲೇ ಎರಡು ಬಾರಿ ಅರ್ಜಿ ಆಹ್ವಾನಿಸಲಾಗಿದ್ದು, ತಾಲ್ಲೂಕಿನಿಂದ ಅರ್ಜಿ ಬಾರದಿರುವ ಕಾರಣ ಮತ್ತೊಮ್ಮೆ ಪ್ರಕಟಣೆ ನೀಡಲಾಗಿದೆ.

ಸದರಿ ತಾಲ್ಲೂಕಿನಿಂದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಬಾರದಿದ್ದರೆ ಬೇರೆ ತಾಲ್ಲೂಕಿನ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ನೇರ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಕಂಪ್ಯೂಟರ್ ಸೈನ್ಸ್ ಅಥವಾ ಐ.ಟಿ ಪದವಿ ಅಥವಾ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್  ಪದವಿ ಪಡೆದಿರಬೇಕು. ಸೇವಾ ಅನುಭವ ಟೆಕ್ನಾಲಜಿ ಅಂಡ್ ಸಾಫ್ಟ್‍ವೇರ್ ಅಪ್ಲಿಕೇಷನ್ ಸಪೋರ್ಟ್‍ನಲ್ಲಿ ಕನಿಷ್ಟ 2 ವರ್ಷಗಳು ಕೆಲಸ ನಿರ್ವಹಿಸಿದ ಅನುಭವ ಇರಬೇಕು.  ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು.  ಕ್ಷೇತ್ರ ಕಾರ್ಯ ನಿರ್ವಹಿಸಲು ಸಿದ್ದರಿರಬೇಕು. ಕಡ್ಡಾಯವಾಗಿ ಸ್ಥಳೀಯ ಅಭ್ಯರ್ಥಿಯಾಗಿರಬೇಕು. ಅರ್ಜಿ ಸಲ್ಲಿಸಲು ಜೂನ್ 15 ಸಂಜೆ 5 ಗಂಟೆ ಗಂಟೆಯೊಳಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೆ.ಆರ್.ಪುರ 9ಕ್ರಾಸ್, ಹಾಸನ ಇವರಿಗೆ ಸಲ್ಲಿಸಬೇಕು.

ಹೆಚ್ಚಿನ ವಿವರಗಳಿಗಾಗಿ ದೂ. ಸಂ: 08172-267218, 235133 ಗೆ ಸಂಪರ್ಕಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ದೆಹಲಿ ಸಿಎಂ ಕೇಜ್ರಿವಾಲ್ ಕೊರೋನಾ ಪರೀಕ್ಷೆ ಫಲಿತಾಂಶ ಇಂದು