Webdunia - Bharat's app for daily news and videos

Install App

ರಾಜ್ಯದ ಪ್ರಾಥಮಿಕ, ಪ್ರೌಢ ಶಾಲಾ 'ದೈಹಿಕ ಶಿಕ್ಷಕ'ರಿಗೆ ಭರ್ಜರಿ ಗುಡ್ ನ್ಯೂಸ್

Webdunia
ಗುರುವಾರ, 10 ಮಾರ್ಚ್ 2022 (20:36 IST)
ರಾಜ್ಯದ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮುಖ್ಯ ಶಿಕ್ಷಕರ, ಉಪ ಪ್ರಾಂಶುಪಾಲರ ಹುದ್ದೆಗಳು ಖಾಲಿಯಿದ್ದಲ್ಲಿ, ಆ ಹುದ್ದೆಗಳಿಗೆ ದೈಹಿಕ ಶಿಕ್ಷಣ ಶಿಕ್ಷಕರನ್ನು ಸೇವಾ ಜೇಷ್ಠತಾ ಆಧಾರದ ಮೇಲೆ, ಇನ್ಮುಂದೆ ಪ್ರಭಾರದಲ್ಲಿರಿಸಲು ಸರ್ಕಾರ ಅನುಮತಿಸಿದೆ.
ಈ ಮೂಲಕ ದೈಹಿಕ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ.
ಈ ಕುರಿತಂತೆ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ, ಸಾರ್ವಜನಿಕ ಶಿಕ್ಷಣ ಆಯುಕ್ತರಿಗೆ ಪತ್ರದಲ್ಲಿ ಸೂಚಿಸಿದ್ದು, ಸರ್ಕಾರಿ, ಅನುದಾನಿತ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮುಖ್ಯ ಶಿಕ್ಷಕರ, ಉಪ ಪ್ರಾಂಶುಪಾಲರ ಹುದ್ದೆಗಳು ಖಾಲಿಯಿದ್ದಲ್ಲಿ, ಸೇವಾ ಜೇಷ್ಠತಾ ಆಧಾರದ ಮೇಲೆ ದೈಹಿಕ ಶಿಕ್ಷಕರುಗಳನ್ನು, ಕರ್ನಾಟಕ ಸೇವಾ ನಿಯಮಾವಳಿ ನಿಯಮ-1958ರ ನಿಯಮ-68ರನ್ವಯ ಅಧಿಕ ಪ್ರಭಾರದಲ್ಲಿರಿಸಲು, ಸರ್ಕಾರ ಅನುಮೋದನೆ ನೀಡಿದೆ ಎಂದು ನಿರ್ದೇಶಿಸಿದ್ದಾರೆ.
ಅಂದಹಾಗೇ, ಇದುವರೆಗೆ ಸರ್ಕಾರಿ, ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆಯಲ್ಲಿ ಮುಖ್ಯ ಶಿಕ್ಷಕರು, ಉಪ ಪ್ರಾಂಶುಪಾಲರು ಇಲ್ಲದೇ ಇದ್ದಾಗ, ಇತರೆ ವಿಷಯ ಶಿಕ್ಷಕರಿಗೆ ಪ್ರಭಾರ ಕಾರ್ಯಭಾರವನ್ನು ನೀಡಲಾಗುತ್ತಿತ್ತು. ಆದ್ರೇ.. ದೈಹಿಕ ಶಿಕ್ಷಕರಿಗೆ ಈ ಹುದ್ದೆಗಳಿಗೆ ಪ್ರಭಾರ ಜವಾಬ್ದಾರಿ ನೀಡುವ ಅವಕಾಶ ಇರಲಿಲ್ಲ. ಇದೀಗ ಸರ್ಕಾರ ಅವರಿಗೂ ಪ್ರಭಾರ ಕಾರ್ಯಬಾರದ ಜವಾಬ್ದಾರಿಗೆ ಅನುಮತಿಸಿ ಆದೇಶಿಸಿದೆ. ಈ ಮೂಲಕ ರಾಜ್ಯದ ದೈಹಿಕ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments