Webdunia - Bharat's app for daily news and videos

Install App

ರಾಜ್ಯದ ಪ್ರಾಥಮಿಕ, ಪ್ರೌಢ ಶಾಲಾ 'ದೈಹಿಕ ಶಿಕ್ಷಕ'ರಿಗೆ ಭರ್ಜರಿ ಗುಡ್ ನ್ಯೂಸ್

Webdunia
ಶುಕ್ರವಾರ, 11 ಮಾರ್ಚ್ 2022 (18:55 IST)
ರಾಜ್ಯದ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮುಖ್ಯ ಶಿಕ್ಷಕರ, ಉಪ ಪ್ರಾಂಶುಪಾಲರ ಹುದ್ದೆಗಳು ಖಾಲಿಯಿದ್ದಲ್ಲಿ, ಆ ಹುದ್ದೆಗಳಿಗೆ ದೈಹಿಕ ಶಿಕ್ಷಣ ಶಿಕ್ಷಕರನ್ನು ಸೇವಾ ಜೇಷ್ಠತಾ ಆಧಾರದ ಮೇಲೆ, ಇನ್ಮುಂದೆ ಪ್ರಭಾರದಲ್ಲಿರಿಸಲು ಸರ್ಕಾರ ಅನುಮತಿಸಿದೆ.
ಈ ಮೂಲಕ ದೈಹಿಕ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ.
ಈ ಕುರಿತಂತೆ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ, ಸಾರ್ವಜನಿಕ ಶಿಕ್ಷಣ ಆಯುಕ್ತರಿಗೆ ಪತ್ರದಲ್ಲಿ ಸೂಚಿಸಿದ್ದು, ಸರ್ಕಾರಿ, ಅನುದಾನಿತ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮುಖ್ಯ ಶಿಕ್ಷಕರ, ಉಪ ಪ್ರಾಂಶುಪಾಲರ ಹುದ್ದೆಗಳು ಖಾಲಿಯಿದ್ದಲ್ಲಿ, ಸೇವಾ ಜೇಷ್ಠತಾ ಆಧಾರದ ಮೇಲೆ ದೈಹಿಕ ಶಿಕ್ಷಕರುಗಳನ್ನು, ಕರ್ನಾಟಕ ಸೇವಾ ನಿಯಮಾವಳಿ ನಿಯಮ-1958ರ ನಿಯಮ-68ರನ್ವಯ ಅಧಿಕ ಪ್ರಭಾರದಲ್ಲಿರಿಸಲು, ಸರ್ಕಾರ ಅನುಮೋದನೆ ನೀಡಿದೆ ಎಂದು ನಿರ್ದೇಶಿಸಿದ್ದಾರೆ.
ಅಂದಹಾಗೇ, ಇದುವರೆಗೆ ಸರ್ಕಾರಿ, ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆಯಲ್ಲಿ ಮುಖ್ಯ ಶಿಕ್ಷಕರು, ಉಪ ಪ್ರಾಂಶುಪಾಲರು ಇಲ್ಲದೇ ಇದ್ದಾಗ, ಇತರೆ ವಿಷಯ ಶಿಕ್ಷಕರಿಗೆ ಪ್ರಭಾರ ಕಾರ್ಯಭಾರವನ್ನು ನೀಡಲಾಗುತ್ತಿತ್ತು. ಆದ್ರೇ.. ದೈಹಿಕ ಶಿಕ್ಷಕರಿಗೆ ಈ ಹುದ್ದೆಗಳಿಗೆ ಪ್ರಭಾರ ಜವಾಬ್ದಾರಿ ನೀಡುವ ಅವಕಾಶ ಇರಲಿಲ್ಲ. ಇದೀಗ ಸರ್ಕಾರ ಅವರಿಗೂ ಪ್ರಭಾರ ಕಾರ್ಯಬಾರದ ಜವಾಬ್ದಾರಿಗೆ ಅನುಮತಿಸಿ ಆದೇಶಿಸಿದೆ. ಈ ಮೂಲಕ ರಾಜ್ಯದ ದೈಹಿಕ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments